Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...