Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...