Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...