Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...