Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...