Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...