Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...