Homeಮುಖಪುಟಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ: ಕೇಂದ್ರ

- Advertisement -
- Advertisement -

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸಲು ಇಂದು ಸುಪ್ರೀಂನಲ್ಲಿ ವಿಚಾರಣೆ ನಡೆಯಲಿದೆ. ಇದಕ್ಕೂ ಮೊದಲೇ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಹೇಳಿದೆ.

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ, ವಾಕ್‌ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮವನ್ನು ಸಮತೋಲನಗೊಳಿಸುವ ಸಲುವಾಗಿ ಈಗಾಗಲೇ ನಿಗದಿತ ಚೌಕಟ್ಟು, ಶಾಸನಬದ್ದ ನಿಬಂಧನೆಗಳ ಅಡಿಯಲ್ಲಿ ನಿಯಂತ್ರಿಸಲಾಗಿದೆ” ಎಂದು ಕೇಂದ್ರ ಹೇಳಿದೆ.

ಮಾರ್ಗಸೂಚಿಗಳನ್ನು ನಿರ್ಧರಿಸುವುದಕ್ಕೆ ಸಹಾಯ ಮಾಡುವ ಅಮಿಕಸ್ ಕ್ಯೂರಿ (Amicus Curiae – a friend of the court)ಯನ್ನು ಅಥವಾ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯವನ್ನು ಕೇಂದ್ರ ಸರ್ಕಾರ ಒತ್ತಾಯಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಖಾಸಗಿ ಚಾನೆಲ್, ಸುದರ್ಶನ್ ಟಿ.ವಿ ವಿರುದ್ಧದ ಪ್ರಕರಣಕ್ಕೆ ಕೇಂದ್ರದ ಈ ಅಫಿಡವಿಟ್ ಸಂಬಂಧಿಸಿದೆ. “ಮುಸ್ಲಿಮರು ಸರ್ಕಾರಿ ಸೇವೆಗಳಿಗೆ ನುಸುಳುತ್ತಿದ್ದಾರೆ” (ಯುಪಿಎಸ್‌ಸಿ ಜಿಹಾದ್) ಎಂದು ಸುದರ್ಶನ್ ಟಿ.ವಿ ತನ್ನ ಕಾರ್ಯಕ್ರಮದ ಪ್ರೋಮೋವೊಂದನ್ನು ಬಿಡುಗಡೆ ಮಾಡಿ ವಿವಾದಕ್ಕೆ ಹುಟ್ಟುಹಾಕಿತ್ತು.

“ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ನಿರ್ದಿಷ್ಟ ರೀತಿಯಲ್ಲಿ ಬ್ರಾಂಡ್ ಮಾಡಲು ಸಾಧ್ಯವಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಸಲು, ಪ್ರತಿಷ್ಠೆಯನ್ನು ಹಾಳುಮಾಡಲು, ವ್ಯಕ್ತಿತ್ವಕ್ಕೆ ಮಸಿಬಳಿಯುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಪಾಲು ದೊಡ್ಡದಾಗಿದೆ” ಎಂದು ಪ್ರಕರಣದ ವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸುದರ್ಶನ್ ಟಿ.ವಿ‌ಗೆ ಮಂಗಳವಾರ ಹೇಳಿತ್ತು.

ಇದನ್ನು ಓದಿ: ಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ವಿಚಾರಣೆಯ ಸಂಧರ್ಭದಲ್ಲಿ ನ್ಯಾಯಾಧೀಶರೊಬ್ಬರು “ಎಲೆಕ್ಟ್ರಾನಿಕ್ ಮಾಧ್ಯಮದ ಸಮಸ್ಯೆ ಟಿಆರ್‌ಪಿಗಳದ್ದೇ ಆಗಿದೆ, ಇದು ಹೆಚ್ಚು ಹೆಚ್ಚು ಉದ್ರೇಕಗೊಳಿಸಿ ಜನರ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನು ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...