Homeಮುಖಪುಟಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ: ಕೇಂದ್ರ

- Advertisement -
- Advertisement -

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸಲು ಇಂದು ಸುಪ್ರೀಂನಲ್ಲಿ ವಿಚಾರಣೆ ನಡೆಯಲಿದೆ. ಇದಕ್ಕೂ ಮೊದಲೇ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಹೇಳಿದೆ.

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ, ವಾಕ್‌ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮವನ್ನು ಸಮತೋಲನಗೊಳಿಸುವ ಸಲುವಾಗಿ ಈಗಾಗಲೇ ನಿಗದಿತ ಚೌಕಟ್ಟು, ಶಾಸನಬದ್ದ ನಿಬಂಧನೆಗಳ ಅಡಿಯಲ್ಲಿ ನಿಯಂತ್ರಿಸಲಾಗಿದೆ” ಎಂದು ಕೇಂದ್ರ ಹೇಳಿದೆ.

ಮಾರ್ಗಸೂಚಿಗಳನ್ನು ನಿರ್ಧರಿಸುವುದಕ್ಕೆ ಸಹಾಯ ಮಾಡುವ ಅಮಿಕಸ್ ಕ್ಯೂರಿ (Amicus Curiae – a friend of the court)ಯನ್ನು ಅಥವಾ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯವನ್ನು ಕೇಂದ್ರ ಸರ್ಕಾರ ಒತ್ತಾಯಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಖಾಸಗಿ ಚಾನೆಲ್, ಸುದರ್ಶನ್ ಟಿ.ವಿ ವಿರುದ್ಧದ ಪ್ರಕರಣಕ್ಕೆ ಕೇಂದ್ರದ ಈ ಅಫಿಡವಿಟ್ ಸಂಬಂಧಿಸಿದೆ. “ಮುಸ್ಲಿಮರು ಸರ್ಕಾರಿ ಸೇವೆಗಳಿಗೆ ನುಸುಳುತ್ತಿದ್ದಾರೆ” (ಯುಪಿಎಸ್‌ಸಿ ಜಿಹಾದ್) ಎಂದು ಸುದರ್ಶನ್ ಟಿ.ವಿ ತನ್ನ ಕಾರ್ಯಕ್ರಮದ ಪ್ರೋಮೋವೊಂದನ್ನು ಬಿಡುಗಡೆ ಮಾಡಿ ವಿವಾದಕ್ಕೆ ಹುಟ್ಟುಹಾಕಿತ್ತು.

“ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ನಿರ್ದಿಷ್ಟ ರೀತಿಯಲ್ಲಿ ಬ್ರಾಂಡ್ ಮಾಡಲು ಸಾಧ್ಯವಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಸಲು, ಪ್ರತಿಷ್ಠೆಯನ್ನು ಹಾಳುಮಾಡಲು, ವ್ಯಕ್ತಿತ್ವಕ್ಕೆ ಮಸಿಬಳಿಯುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಪಾಲು ದೊಡ್ಡದಾಗಿದೆ” ಎಂದು ಪ್ರಕರಣದ ವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸುದರ್ಶನ್ ಟಿ.ವಿ‌ಗೆ ಮಂಗಳವಾರ ಹೇಳಿತ್ತು.

ಇದನ್ನು ಓದಿ: ಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ವಿಚಾರಣೆಯ ಸಂಧರ್ಭದಲ್ಲಿ ನ್ಯಾಯಾಧೀಶರೊಬ್ಬರು “ಎಲೆಕ್ಟ್ರಾನಿಕ್ ಮಾಧ್ಯಮದ ಸಮಸ್ಯೆ ಟಿಆರ್‌ಪಿಗಳದ್ದೇ ಆಗಿದೆ, ಇದು ಹೆಚ್ಚು ಹೆಚ್ಚು ಉದ್ರೇಕಗೊಳಿಸಿ ಜನರ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನು ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....