Homeಕರೋನಾ ತಲ್ಲಣ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ - ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

- Advertisement -
- Advertisement -

ಒಕ್ಕೂಟ ಸರ್ಕಾರದ ಆಡಳಿತಾರೂಢ ಬಿಜೆಪಿ ಪಕ್ಷವು ತನ್ನ ‘ಬ್ಲೂ ಟಿಕ್’ ಬ್ಯಾಡ್ಜ್‌ಗಾಗಿ ಟ್ವಿಟ್ಟರ್ ಜೊತೆ ಹೋರಾಡುವ ಬದಲು ಕೊರೊನಾ ವಿರುದ್ಧ ನಾಗರಿಕರಿಗೆ ಲಸಿಕೆ ಹಾಕುವ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಮಹಾರಾಷ್ಟ್ರ ಸಚಿವ, ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ವಕ್ತಾರ ನವಾಬ್‌ ಮಲಿಕ್ ಸೋಮವಾರ ಹೇಳಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರ ವೈಯಕ್ತಿಕ ಖಾತೆಗಳ ‘ಬ್ಲೂ ಟಿಕ್’ ಅನ್ನು ಟ್ವಿಟರ್ ತೆಗೆದು ಹಾಕಿತ್ತು ಮತ್ತು ನಂತರ ಅದನ್ನು ಮರು ಸ್ಥಾಪಿಸಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತವಾದ ಕೆಲವೇ ದಿನಗಳ ನಂತರ ನವಾಬ್ ಮಲಿಕ್‌ ಸುದ್ದಿಗಾರರೊಂದಿಗೆ ಮಾತನಾಡಿ ಒಕ್ಕೂಟ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಬ್ಲೂಟಿಕ್ ತೆಗೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ವಿಟರ್‌, “ಬ್ಲೂಟಿಕ್‌ ಬ್ಯಾಡ್ಜ್ ಇರುವ ಟ್ವಿಟರ್‌ ಖಾತೆಯು ಆರು ತಿಂಗಳವರೆಗೆ ನಿಷ್ಕ್ರಿಯವಾಗಿದ್ದರೆ ಅಥವಾ ಅದರ ಪರಿಶೀಲನೆಯು ಅಪೂರ್ಣವಾಗಿದ್ದರೆ ಅದು ಸ್ವಯಂಚಾಲಿತವಾಗಿ ತೆಗೆದುಹಾಕಬಹುದು” ಎಂದು ಹೇಳಿತ್ತು.

ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

‘ಬ್ಲೂ ಟಿಕ್’ ವಿಷಯದ ಬಗ್ಗೆ ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಟ್ವಿಟ್ಟರ್ ಜೊತೆ ಹೋರಾಡುತ್ತಿರುವಾಗ, ದೇಶದ ನಾಗರಿಕರು ಕೊರೊನಾ ವಿರುದ್ಧ ಲಸಿಕೆ ಹಾಕಲು ಹೋರಾಡುತ್ತಿದ್ದಾರೆ ಎಂದು ನವಾಬ್‌ ಮಲಿಕ್ ಸೋಮವಾರ ಹೇಳಿದ್ದಾರೆ.

“ಇದು ಬ್ಲೂಟಿಕ್‌‌ ಆಗಿರಲಿ ಅಥವಾ ವ್ಯಾಕ್ಸಿನೇಷನ್ ವಿಷಯವಾಗಿರಲಿ ಒಕ್ಕೂಟ ಸರ್ಕಾರವನ್ನು ಟೀಕಿಸಲಾಗುತ್ತಿದೆ. ಆದರೆ ಒಕ್ಕೂಟ ಸರ್ಕಾರವು ಟೀಕೆಗಳನ್ನು ನಿರ್ಲಕ್ಷಿಸುತ್ತಾ ತನ್ನ ದುರಹಂಕಾರ ಪ್ರದರ್ಶಿಸುತ್ತಿದೆ. ಟ್ವಿಟರ್‌ನೊಂದಿಗೆ ಬ್ಲೂಟಿಕ್‌‌ ವಿರುದ್ಧ ಹೋರಾಡುವ ಬದಲು ನಾಗರಿಕರಿಗೆ ಲಸಿಕೆ ಹಾಕುವಲ್ಲಿ ಬಿಜೆಪಿ ಹೆಚ್ಚು ಗಮನ ಹರಿಸಬೇಕು” ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ನವಾಬ್‌ ಮಲಿಕ್‌, “ಜನರು ಕೊರೊನಾ ತಡೆಗಟ್ಟುವ ಮಾನದಂಡಗಳನ್ನು ಅನುಸರಿಸಿದರೆ, ಇಡೀ ಮಹಾರಾಷ್ಟ್ರವು ಲಾಕ್‌ಡೌನ್‌ ನಿರ್ಬಂಧಗಳಿಂದ ಹೊರಬರುತ್ತದೆ” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಎನ್‌ಸಿಪಿ, ಕಾಂಗ್ರೆಸ್‌ ಮತ್ತು ಶಿವಸೇನೆಯ ಆಡಳಿತವಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...