Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...