Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...