Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...