Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...