Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...