Homeಮುಖಪುಟಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

- Advertisement -
- Advertisement -

ಏಳು ವರ್ಷಗಳ ಹಿಂದೆ ಕೆಳ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಮಹಿಳೆಯನ್ನು ಕೆಲವೊಮ್ಮೆ ಹಿಂಬಾಲಿಸುವುದು, ಆಕೆಗೆ ನಿಂದಿಸುವುದು ಆಕೆಯ ಸಭ್ಯತೆಯನ್ನು ಘಾಸಿಗೊಳಿಸುವಂತಹ (ಘನತೆಯನ್ನು ಕುಂದಿಸುವ) ಕೃತ್ಯ ಎನ್ನಲಾಗದು ಎಂದಿದೆ.

ಇಂತಹ ನಡವಳಿಕೆಗಳಿಂದ ಕಿರಿಕಿರಿ ಉಂಟಾಗಬಹುದು. ಆದರೆ, ಮಹಿಳೆಯ ಘನತೆಯನ್ನು ಕುಂದಿಸುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅನಿಲ್ ಪನ್ಸಾರೆ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಡಿಸೆಂಬರ್ 16ರಂದು ನೀಡಿದ ಆದೇಶದಲ್ಲಿ ತಿಳಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆರೋಪಿ ಸೈಕಲ್‌ನಲ್ಲಿ ಪ್ರಯಣಿಸುತ್ತಿದ್ದ ವೇಳೆ ದೂರುದಾರೆಯನ್ನು ತಳ್ಳಿದ ಅಥವಾ ದಬ್ಬಿದ ಕೃತ್ಯವನ್ನು, ಆಕೆಯನ್ನು ಹಿಂಬಾಲಿಸುವ ಮತ್ತು ಕಿರುಕುಳ ನೀಡುವ ಆತನ ನಡೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ವಿವರಿಸಿದೆ.

ಆರೋಪಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಅಥವಾ ತನ್ನ ದೇಹದ ನಿರ್ದಿಷ್ಟ ಭಾಗವನ್ನು ಸ್ಪರ್ಶಿಸುವ ಮೂಲಕ ತಳ್ಳಿದ್ದಾನೆ ಎಂದು ದೂರುದಾರೆ ಆರೋಪಿಸಿಲ್ಲ ಎಂಬ ಅಂಶವನ್ನು ನ್ಯಾಯಮೂರ್ತಿಗಳು ತೀರ್ಪು ನೀಡುವ ವೇಳೆ ಉಲ್ಲೇಖಿಸಿದ್ದಾರೆ.

ಆದ್ದರಿಂದ, ಐಪಿಸಿ ಸೆಕ್ಷನ್ 354ರ (ಗೌರವಕ್ಕೆ ಧಕ್ಕೆ) ಅಡಿಯಲ್ಲಿ ಮೇಲ್ಮನವಿದಾರನನ್ನು ದೋಷಿ ಎಂದು ಪರಿಗಣಿಸುವಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯ ಎಡವಿವೆ ಎಂಬುದಾಗಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ವಾದದ ಪ್ರಕಾರ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತನ್ನನ್ನು ಹಿಂಬಾಲಿಸಿ ನಿಂದಿಸಿದ್ದಾಗಿ ದೂರುದಾರೆ ಆರೋಪಿಸಿದ್ದರು. ಘಟನೆ ನಡೆದ ದಿನ ನಾನು ಮಾರುಕಟ್ಟೆಗೆ ತೆರಳುತ್ತಿದ್ದಾಗ ಬೈಸಿಕಲ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿ, ನನ್ನನ್ನು ತಳ್ಳಿದ. ನಾನು ಕೋಪಗೊಂಡರೂ ಹಿಂಬಾಲಿಸುವುದನ್ನು ಮುಂದುವರೆಸಿದ್ದ. ಆದ್ದರಿಂದ ನಾನು ಆತನ ಮೇಲೆ ಕೈ ಮಾಡಿದೆ ಎಂದು ದೂರುದಾರೆ ಹೇಳಿದ್ದರು.

ಈ ಸಾಕ್ಷ್ಯ ಆಧರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಮೇ 9,2016ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಆತನಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹2,000 ದಂಡ ವಿಧಿಸಿತ್ತು. ಇದನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿದಾರ ಪ್ರಶ್ನಿಸಿದರೂ, ಜುಲೈ 10, 2023ರಂದು ಅರ್ಜಿ ವಜಾಗೊಂಡಿತ್ತು.

ಈ ಪ್ರಕರಣದಲ್ಲಿ ದೂರುದಾರೆಯ ಹೇಳಿಕೆ ಹೊರತುಪಡಿಸಿ ಬೇರೆ ಯಾವುದೇ ಪುರಾವೆಗಳಿಲ್ಲ. ಇದು ಅಪರಾಧವನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಹೇಳಿದೆ. ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ತೀರ್ಪುಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಲಿಂಗ ಪರಿವರ್ತಿತ ಶಿಕ್ಷಕಿಯನ್ನು ಕೆಲಸದಿಂದ ಕೈಬಿಟ್ಟ ಶಾಲೆ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...