Homeಮುಖಪುಟಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

- Advertisement -
- Advertisement -

ಏಳು ವರ್ಷಗಳ ಹಿಂದೆ ಕೆಳ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಮಹಿಳೆಯನ್ನು ಕೆಲವೊಮ್ಮೆ ಹಿಂಬಾಲಿಸುವುದು, ಆಕೆಗೆ ನಿಂದಿಸುವುದು ಆಕೆಯ ಸಭ್ಯತೆಯನ್ನು ಘಾಸಿಗೊಳಿಸುವಂತಹ (ಘನತೆಯನ್ನು ಕುಂದಿಸುವ) ಕೃತ್ಯ ಎನ್ನಲಾಗದು ಎಂದಿದೆ.

ಇಂತಹ ನಡವಳಿಕೆಗಳಿಂದ ಕಿರಿಕಿರಿ ಉಂಟಾಗಬಹುದು. ಆದರೆ, ಮಹಿಳೆಯ ಘನತೆಯನ್ನು ಕುಂದಿಸುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅನಿಲ್ ಪನ್ಸಾರೆ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಡಿಸೆಂಬರ್ 16ರಂದು ನೀಡಿದ ಆದೇಶದಲ್ಲಿ ತಿಳಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆರೋಪಿ ಸೈಕಲ್‌ನಲ್ಲಿ ಪ್ರಯಣಿಸುತ್ತಿದ್ದ ವೇಳೆ ದೂರುದಾರೆಯನ್ನು ತಳ್ಳಿದ ಅಥವಾ ದಬ್ಬಿದ ಕೃತ್ಯವನ್ನು, ಆಕೆಯನ್ನು ಹಿಂಬಾಲಿಸುವ ಮತ್ತು ಕಿರುಕುಳ ನೀಡುವ ಆತನ ನಡೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ವಿವರಿಸಿದೆ.

ಆರೋಪಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಅಥವಾ ತನ್ನ ದೇಹದ ನಿರ್ದಿಷ್ಟ ಭಾಗವನ್ನು ಸ್ಪರ್ಶಿಸುವ ಮೂಲಕ ತಳ್ಳಿದ್ದಾನೆ ಎಂದು ದೂರುದಾರೆ ಆರೋಪಿಸಿಲ್ಲ ಎಂಬ ಅಂಶವನ್ನು ನ್ಯಾಯಮೂರ್ತಿಗಳು ತೀರ್ಪು ನೀಡುವ ವೇಳೆ ಉಲ್ಲೇಖಿಸಿದ್ದಾರೆ.

ಆದ್ದರಿಂದ, ಐಪಿಸಿ ಸೆಕ್ಷನ್ 354ರ (ಗೌರವಕ್ಕೆ ಧಕ್ಕೆ) ಅಡಿಯಲ್ಲಿ ಮೇಲ್ಮನವಿದಾರನನ್ನು ದೋಷಿ ಎಂದು ಪರಿಗಣಿಸುವಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯ ಎಡವಿವೆ ಎಂಬುದಾಗಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ವಾದದ ಪ್ರಕಾರ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತನ್ನನ್ನು ಹಿಂಬಾಲಿಸಿ ನಿಂದಿಸಿದ್ದಾಗಿ ದೂರುದಾರೆ ಆರೋಪಿಸಿದ್ದರು. ಘಟನೆ ನಡೆದ ದಿನ ನಾನು ಮಾರುಕಟ್ಟೆಗೆ ತೆರಳುತ್ತಿದ್ದಾಗ ಬೈಸಿಕಲ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿ, ನನ್ನನ್ನು ತಳ್ಳಿದ. ನಾನು ಕೋಪಗೊಂಡರೂ ಹಿಂಬಾಲಿಸುವುದನ್ನು ಮುಂದುವರೆಸಿದ್ದ. ಆದ್ದರಿಂದ ನಾನು ಆತನ ಮೇಲೆ ಕೈ ಮಾಡಿದೆ ಎಂದು ದೂರುದಾರೆ ಹೇಳಿದ್ದರು.

ಈ ಸಾಕ್ಷ್ಯ ಆಧರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಮೇ 9,2016ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಆತನಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹2,000 ದಂಡ ವಿಧಿಸಿತ್ತು. ಇದನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿದಾರ ಪ್ರಶ್ನಿಸಿದರೂ, ಜುಲೈ 10, 2023ರಂದು ಅರ್ಜಿ ವಜಾಗೊಂಡಿತ್ತು.

ಈ ಪ್ರಕರಣದಲ್ಲಿ ದೂರುದಾರೆಯ ಹೇಳಿಕೆ ಹೊರತುಪಡಿಸಿ ಬೇರೆ ಯಾವುದೇ ಪುರಾವೆಗಳಿಲ್ಲ. ಇದು ಅಪರಾಧವನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಹೇಳಿದೆ. ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ತೀರ್ಪುಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಲಿಂಗ ಪರಿವರ್ತಿತ ಶಿಕ್ಷಕಿಯನ್ನು ಕೆಲಸದಿಂದ ಕೈಬಿಟ್ಟ ಶಾಲೆ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...