Homeಮುಖಪುಟಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

- Advertisement -
- Advertisement -

ಏಳು ವರ್ಷಗಳ ಹಿಂದೆ ಕೆಳ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಮಹಿಳೆಯನ್ನು ಕೆಲವೊಮ್ಮೆ ಹಿಂಬಾಲಿಸುವುದು, ಆಕೆಗೆ ನಿಂದಿಸುವುದು ಆಕೆಯ ಸಭ್ಯತೆಯನ್ನು ಘಾಸಿಗೊಳಿಸುವಂತಹ (ಘನತೆಯನ್ನು ಕುಂದಿಸುವ) ಕೃತ್ಯ ಎನ್ನಲಾಗದು ಎಂದಿದೆ.

ಇಂತಹ ನಡವಳಿಕೆಗಳಿಂದ ಕಿರಿಕಿರಿ ಉಂಟಾಗಬಹುದು. ಆದರೆ, ಮಹಿಳೆಯ ಘನತೆಯನ್ನು ಕುಂದಿಸುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅನಿಲ್ ಪನ್ಸಾರೆ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಡಿಸೆಂಬರ್ 16ರಂದು ನೀಡಿದ ಆದೇಶದಲ್ಲಿ ತಿಳಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆರೋಪಿ ಸೈಕಲ್‌ನಲ್ಲಿ ಪ್ರಯಣಿಸುತ್ತಿದ್ದ ವೇಳೆ ದೂರುದಾರೆಯನ್ನು ತಳ್ಳಿದ ಅಥವಾ ದಬ್ಬಿದ ಕೃತ್ಯವನ್ನು, ಆಕೆಯನ್ನು ಹಿಂಬಾಲಿಸುವ ಮತ್ತು ಕಿರುಕುಳ ನೀಡುವ ಆತನ ನಡೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ವಿವರಿಸಿದೆ.

ಆರೋಪಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಅಥವಾ ತನ್ನ ದೇಹದ ನಿರ್ದಿಷ್ಟ ಭಾಗವನ್ನು ಸ್ಪರ್ಶಿಸುವ ಮೂಲಕ ತಳ್ಳಿದ್ದಾನೆ ಎಂದು ದೂರುದಾರೆ ಆರೋಪಿಸಿಲ್ಲ ಎಂಬ ಅಂಶವನ್ನು ನ್ಯಾಯಮೂರ್ತಿಗಳು ತೀರ್ಪು ನೀಡುವ ವೇಳೆ ಉಲ್ಲೇಖಿಸಿದ್ದಾರೆ.

ಆದ್ದರಿಂದ, ಐಪಿಸಿ ಸೆಕ್ಷನ್ 354ರ (ಗೌರವಕ್ಕೆ ಧಕ್ಕೆ) ಅಡಿಯಲ್ಲಿ ಮೇಲ್ಮನವಿದಾರನನ್ನು ದೋಷಿ ಎಂದು ಪರಿಗಣಿಸುವಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯ ಎಡವಿವೆ ಎಂಬುದಾಗಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ವಾದದ ಪ್ರಕಾರ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತನ್ನನ್ನು ಹಿಂಬಾಲಿಸಿ ನಿಂದಿಸಿದ್ದಾಗಿ ದೂರುದಾರೆ ಆರೋಪಿಸಿದ್ದರು. ಘಟನೆ ನಡೆದ ದಿನ ನಾನು ಮಾರುಕಟ್ಟೆಗೆ ತೆರಳುತ್ತಿದ್ದಾಗ ಬೈಸಿಕಲ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿ, ನನ್ನನ್ನು ತಳ್ಳಿದ. ನಾನು ಕೋಪಗೊಂಡರೂ ಹಿಂಬಾಲಿಸುವುದನ್ನು ಮುಂದುವರೆಸಿದ್ದ. ಆದ್ದರಿಂದ ನಾನು ಆತನ ಮೇಲೆ ಕೈ ಮಾಡಿದೆ ಎಂದು ದೂರುದಾರೆ ಹೇಳಿದ್ದರು.

ಈ ಸಾಕ್ಷ್ಯ ಆಧರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಮೇ 9,2016ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಆತನಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹2,000 ದಂಡ ವಿಧಿಸಿತ್ತು. ಇದನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿದಾರ ಪ್ರಶ್ನಿಸಿದರೂ, ಜುಲೈ 10, 2023ರಂದು ಅರ್ಜಿ ವಜಾಗೊಂಡಿತ್ತು.

ಈ ಪ್ರಕರಣದಲ್ಲಿ ದೂರುದಾರೆಯ ಹೇಳಿಕೆ ಹೊರತುಪಡಿಸಿ ಬೇರೆ ಯಾವುದೇ ಪುರಾವೆಗಳಿಲ್ಲ. ಇದು ಅಪರಾಧವನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಹೇಳಿದೆ. ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ತೀರ್ಪುಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಲಿಂಗ ಪರಿವರ್ತಿತ ಶಿಕ್ಷಕಿಯನ್ನು ಕೆಲಸದಿಂದ ಕೈಬಿಟ್ಟ ಶಾಲೆ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...