Homeಮುಖಪುಟ2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

- Advertisement -
- Advertisement -

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು. 2023ರ ಚುನಾವಣೆಯಲ್ಲಿ ಆ 17 ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ..

1. ಗೋಕಾಕ್: ರಮೇಶ್ ಜಾರಕಿಹೊಳಿ – ಗೆಲುವು

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರು. ಆನಂತರ ನಡೆದ ಉಪಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಹಾಂತೇಶ್ ಕಡಾಡಿ, ಜೆಡಿಎಸ್‌ನಿಂದ ಚನ್ನಬಸಪ್ಪ ಬಾಳಪ್ಪ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಮೇಶ್ ಜಾರಕಿಹೊಳಿ ಗೆಲುವು ಕಂಡರು.

2. ಅಥಣಿ: ಮಹೇಶ್ ಕುಮಟಳ್ಳಿ – ಸೋಲು

2018ರಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಗೆದ್ದಿದ್ದ ಕಾಂಗ್ರೆಸ್ ಪಕ್ಷದ ಮಹೇಶ್ ಕುಮಟಳ್ಳಿ ಸಹ ರಮೇಶ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. 2019ರ ಉಪ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು. ಈಗ ಅವರ ವಿರುದ್ಧ ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.

3. ಕಾಗವಾಡ: ಶ್ರೀಮಂತ ಪಾಟೀಲ್ – ಸೋಲು

ಬಿಜೆಪಿ ಸೇರಿದ ಶ್ರೀಮಂತ ಪಾಟೀಲ್ ಸಹ ಅನರ್ಹಗೊಂಡು ಮುಂಬೈ ಸೇರಿದ್ದರು. ಆನಂತರ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಭರಮಗೌಡ ಆಲಗೌಡ ಕಾಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

4. ಯಲ್ಲಾಪುರ: ಶಿವರಾಮ ಹೆಬ್ಬಾರ – ಗೆಲುವು

ಉತ್ತರ ಕನ್ನಡದ ಯಲ್ಲಾಪುರದ ಕಾಂಗ್ರೆಸ್ ಶಾಸಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಅಲ್ಲದೆ ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಶಾಸಕರಾಗಿದ್ದರು. ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಣಕ್ಕಿಳಿದಿದ್ದರು. ಶಿವರಾಮ್ ಹೆಬ್ಬಾರ್ ಮತ್ತೆ ಗೆದ್ದಿದ್ದಾರೆ.

5. ವಿಜಯನಗರ: ಸಿದ್ಧಾರ್ಥ ಸಿಂಗ್ – ಸೋಲು

ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆದ್ದಿದ್ದರು. ಈ ಬಾರಿ ಅವರು ಸ್ಪರ್ಧಿಸದೆ ಅವರ ಮಗ ಸಿದ್ಧಾರ್ಥ ಸಿಂಗ್ ರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಎಚ್.ಆರ್ ಗವಿಯಪ್ಪ ಗೆಲುವು ಸಾಧಿಸಿದರು.

6. ಹಿರೇಕೆರೂರು: ಬಿ.ಸಿ ಪಾಟೀಲ್ – ಸೋಲು

ಕಾಂಗ್ರೆಸ್‌ನಿಂದ ಗೆದ್ದಿದ್ದ ಬಿ.ಸಿ ಪಾಟೀಲ್ ಆಪರೇಷನ್ ಕಮಲದ ಕಾರಣಕ್ಕೆ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆಗ ಬಿಜೆಪಿಯಲ್ಲಿ ಯು.ಬಿ ಬಣಕಾರ್ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದರು.

7. ಚಿಕ್ಕಬಳ್ಳಾಪುರ: ಡಾ.ಕೆ ಸುಧಾಕರ್ – ಸೋಲು

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಬಿಜೆಪಿ ಸೇರಿ ಸಚಿವರಾದರು. ಈಗ ಅವರೆದುರು ಕಾಂಗ್ರೆಸ್ ಪಕ್ಷದ ಬಲಿಜ ಸಮುದಾಯದ ಪ್ರದೀಪ್ ಈಶ್ವರ್‌ರವರನ್ನು ಕಣಕ್ಕಿಳಿಸಿದೆ. ಜೆಡಿಎಸ್‌ನಿಂದ ಕೆ.ಪಿ ಬಚ್ಚೇಗೌಡ ಕಣದಲ್ಲಿದ್ದರು. ಪ್ರದೀಪ್ ಈಶ್ವರ್ ಅಚ್ಚರಿಯ ರೀತಿಯಲ್ಲಿ ಡಾ.ಕೆ ಸುಧಾಕರ್‌ರನ್ನು ಸೋಲಿಸಿದ್ದಾರೆ.

8. ಕೆ.ಆರ್ ಪುರಂ: ಭೈರತಿ ಬಸವರಾಜು – ಗೆಲುವು

ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಭೈರತಿ ಬಸವರಾಜು ಬಿಜೆಪಿ ಸೇರಿದ್ದಾರೆ. ಅವರ ಎದುರು ಡಿ.ಕೆ ಮೋಹನ್ ಎಂಬುವವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ ಭೈರತಿ ಬಸವರಾಜು ಗೆಲುವು ಸಾಧಿಸಿದ್ದಾರೆ.

9. ಯಶವಂತಪುರ: ಎಸ್‌.ಟಿ ಸೋಮಶೇಖರ್ – ಗೆಲುವು

ಕಾಂಗ್ರೆಸ್ ತೊರೆದಿದ್ದ ಎಸ್‌.ಟಿ ಸೋಮಶೇಖರ್ ಈಗ ಬಿಜೆಪಿ ಹುರಿಯಾಳು ಆಗಿದ್ದಾರೆ. ಅವರ ವಿರುದ್ಧ ಜೆಡಿಎಸ್‌ನ ಜವರಾಯೀಗೌಡ ಸ್ಪರ್ಧಿಸಿದ್ದರು. ಎಸ್.ಬಾಲರಾಜಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಎಸ್.ಟಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ.

10. ರಾಜರಾಜೇಶ್ವರಿ ನಗರ: ಮುನಿರತ್ನ ನಾಯ್ಡು – ಗೆಲುವು

ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮುನಿರತ್ನ ನಾಯ್ಡು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈಗ ಮತ್ತೆ ಅವರೇ ಬಿಜೆಪಿ ಅಭ್ಯರ್ಥಿ. ಕುಸುಮ ಹನುಮಂತರಾಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

11. ಮಹಾಲಕ್ಷ್ಮಿ ಲೇಔಟ್: ಕೆ.ಗೋಪಾಲಯ್ಯ – ಸೋಲು

ಜೆಡಿಎಸ್‌ನಿಂದ ಗೆಲುವು ಕಂಡಿದ್ದ ಗೋಪಾಲಯ್ಯನವರು ಬಿಜೆಪಿ ಸೇರಿ ಸಚಿವರಾದರು. ಅವರೀಗ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಅವರ ಎದುರು ಕೇಶವಮೂರ್ತಿ ಕಾಂಗ್ರೆಸ್ ಎದುರಾಳಿಯಾದರೆ, ರಾಜಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆದರೂ ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ.

12. ಹೊಸಕೋಟೆ: ಎಂಟಿಬಿ ನಾಗರಾಜ್ – ಸೋಲು

ಎಂಟಿಬಿ ನಾಗರಾಜ್ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದರು. ಈ ಬಾರಿ ಶರತ್ ಬಚ್ಚೇಗೌಡರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

13. ಕೆ.ಆರ್ ಪೇಟೆ: ಕೆ.ಸಿ ನಾರಾಯಣಗೌಡ – ಸೋಲು

ಕೆ.ಆರ್ ಪೇಟೆಯಲ್ಲಿ ಜೆಡಿಎಸ್‌ನಿಂದ ಗೆಲುವು ಕಂಡಿದ್ದ ನಾರಾಯಣಗೌಡ ಬಿಜೆಪಿ ಸೇರಿ ಉಪಚುನಾವಣೆ ಗೆದ್ದರು. ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದರು. ಈಗ ಅವರ ಎದುರು ಬಿ.ಎಲ್ ದೇವರಾಜು ಕಾಂಗ್ರೆಸ್‌ನಿಂದ ಮತ್ತು ಹೆಚ್.ಟಿ ಮಂಜುನಾಥ್ ಜೆಡಿಎಸ್ ಅಭ್ಯರ್ಥಿಗಳಾಗಿದ್ದರು. ಹೆಚ್ ಟಿ ಮಂಜುನಾಥ್ ಗೆಲುವು ಕಂಡರು.

14. ಹುಣಸೂರು: ಎಚ್ ವಿಶ್ವನಾಥ್ – ಜೆಡಿಎಸ್ ಗೆಲುವು

ಜೆಡಿಎಸ್ ನಿಂದ ಗೆಲುವು ಕಂಡಿದ್ದ ಎಚ್ ವಿಶ್ವನಾಥ್ ರವರು ಬಿಜೆಪಿ ಸೇರಿದರೂ ಉಪ ಚುನಾವಣೆಯಲ್ಲಿ ಸೋಲು ಕಂಡರು. ಆನಂತರ ಅವರನ್ನು ಎಂಎಲ್‌ಸಿ ಮಾಡಲಾಯಿತು. ಕೊನೆಗೆ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಆದರೆ ಅವರು ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಎಚ್.ಪಿ ಮಂಜುನಾಥ್, ಜೆಡಿಎಸ್‌ನಿಂದ ಜಿ.ಟಿ ದೇವೇಗೌಡರ ಮಗ ಹರೀಶ್ ಗೌಡ ಮತ್ತು ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್ ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಗೆಲುವು ಕಂಡರು.

15. ಮಸ್ಕಿ: ಪ್ರತಾಪ್ ಗೌಡ ಪಾಟೀಲ – ಸೋಲು

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ್ ಎದುರು ಸೋಲು ಕಂಡಿದ್ದರು. ಈ ಬಾರಿಯೂ ಬಸನಗೌಡ ತುರ್ವಿಹಾಳ್ ಗೆಲುವು ಕಂಡಿದ್ದಾರೆ.

16. ರಾಣೇಬೆನ್ನೂರು: ಆರ್ ಶಂಕರ್ – ಸೋಲು

ಪಕ್ಷೇತರ ಅಭ್ಯರ್ಥಿಯಾದ ಆರ್. ಶಂಕರ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ಆದರೆ ಆಪರೇಷನ್‌ಗೆ ಒಳಗಾದರು. ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಇದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರಕಾಶ್ ಕೋಳಿವಾಡ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...