Homeಕರ್ನಾಟಕಆಹಾರ-ಆರೋಗ್ಯ ಮತ್ತು ಸುರಕ್ಷತೆಗೆ ಮಾನದಂಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಆಹಾರ-ಆರೋಗ್ಯ ಮತ್ತು ಸುರಕ್ಷತೆಗೆ ಮಾನದಂಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಬೀದಿ ಬದಿ ವ್ಯಾಪಾರಿಗಳು ಹಾಗೂ ದೊಡ್ಡ-ದೊಡ್ಡ ರೆಸ್ಟೋರೆಂಟ್‌ಗಳು ಆರೋಗ್ಯ ಮತ್ತು ಸುರಕ್ಷತಾ ಮಾನದಂಡ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಜೊತೆಗೆ, ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿಗಾ ಇರಿಸುವುದಕ್ಕೆ ಸೂಕ್ತ ಕಾರ್ಯ ವಿಧಾನವೊಂದನ್ನು ರೂಪಿಸಬೇಕು’ ಎಂದು ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. 

ದೊಡ್ಡ ರೆಸ್ಟೋರೆಂಟ್ ಆಗಿರಲಿ, ಸಣ್ಣ ರೆಸ್ಟೋರೆಂಟ್ ಆಗಿರಲಿ, ಆಹಾರ ಟ್ರಕ್ ಆಗಿರಲಿ ಅಥವಾ ಬೀದಿಯಲ್ಲಿ ಮಾರಾಟ ಮಾಡುವ ಸ್ಥಳವಾಗಲಿ, ಸೇವನೆಯ ಪ್ರತಿಯೊಂದು ಹಂತದಲ್ಲೂ ಆಹಾರ ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರತ್ಯೇಕತೆಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘ ಮತ್ತು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ ಅರ್ಜಿಯನ್ನು ವಿಲೇವಾರಿ ಮಾಡುವಾಗ ಹೇಳಿದ್ದಾರೆ.  

‘ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘ’ ದ ಗೌರವ ಕಾರ್ಯದರ್ಶಿ ನಾಗರಾಜ ಧನ್ಯ ಮತ್ತು ‘ಬೃಹತ್ ಬೆಂಗಳೂರು ಹೋಟೆಲ್‌ ಗಳ ಸಂಘ’ದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.

‘ಮನುಷ್ಯರ ಆರೋಗ್ಯಕ್ಕೆ ಎದುರಾಗುವ ಅಪಾಯಗಳ ಬಗ್ಗೆ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಸಣ್ಣ, ಮಧ್ಯಮ ಮತ್ತು ಬೃಹತ್ ರೆಸ್ಟೋರೆಂಟ್‌ಗಳಿಗೆ ತ್ರಿಪಕ್ಷೀಯ ಮಾರ್ಗಸೂಚಿಯೊಂದನ್ನು ರೂಪಿಸಬೇಕು’ ಎಂದೂ ನ್ಯಾಯಪೀಠ ಇದೇ ವೇಳೆ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ.

‘ಅರ್ಜಿದಾರರು ಆಕ್ಷೇಪಿಸಿರುವ ನಿಬಂಧನೆಗಳನ್ನು ಅಸಂವಿಧಾನಿಕ ಎಂದು ನಿರ್ಣಯಿಸಿ ಅವುಗಳನ್ನು ರದ್ದುಗೊಳಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.

‘ಆಹಾರ ಸುರಕ್ಷತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸಿ, ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಸಂಬಂಧ ಆಹಾರ ಸುರಕ್ಷಾ ಆಯುಕ್ತರು 2012ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದ್ದರು.

‘ಈ ಅಧಿಸೂಚನೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಂತ್ರಣ, (ಪ್ಯಾಕೇಜಿಂಗ್ ಮತ್ತು ಲೇಬಲಿಂಗ್) ನಿಯಮಗಳು-2011, ಆಹಾರ ಸುರಕ್ಷತೆ ಮತ್ತು ಮಾನದಂಡಗಳು, ಆಹಾರ ಉತ್ಪನ್ನಗಳ ಮಾನದಂಡಗಳು ಮತ್ತು ಆಹಾರ ಸೇರ್ಪಡೆಗಳ ನಿಯಮಗಳು-2011 ಮತ್ತು ಆಹಾರ ಸುರಕ್ಷತೆ ಮತ್ತು ಪ್ರಮಾಣಿತ ಕಾಯ್ದೆ-2006ರ 50 ರಿಂದ 65 ರವರೆಗಿನ‌ ಕಲಂಗಳು ಅಸಾಂವಿಧಾನಿಕ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

‘ಮಾನದಂಡಗಳನ್ನು ಅನ್ವಯಿಸಲು ನಮಗೆ ಸಾಧ್ಯವಿಲ್ಲ’ ಎಂದು ಅರ್ಜಿದಾರರಾದ ಹೋಟೆಲ್ ಸಂಘಗಳು ಪ್ರತಿಪಾದಿಸಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಪಂಚದಾದ್ಯಂತ ವಿವಿಧ ದೇಶಗಳು ಅನುಸರಿಸುತ್ತಿರುವ ಆಹಾರ ಸುರಕ್ಷತಾ ಪದ್ಧತಿಗಳು ಮತ್ತು ಶಾಸನಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಮತ್ತು ಆಹಾರ ಸುರಕ್ಷತೆಯು ಸಾರ್ವಜನಿಕ ಆಡಳಿತದ ಅನಿವಾರ್ಯ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ. 

“ಪ್ರಪಂಚದಾದ್ಯಂತ ಇದೇ ರೀತಿಯ ಆಹಾರ ಸುರಕ್ಷತಾ ನಿಯಮವನ್ನು ಅನುಸರಿಸಿದರೆ, ಅರ್ಜಿದಾರರು ಅಥವಾ ಅವರ ಸದಸ್ಯರು ಅದನ್ನು ಅನುಸರಿಸುವುದಿಲ್ಲ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ : ಆರು ಮಹಿಳೆಯರು ಸಾವು

ಹಳಿ ದಾಟುತ್ತಿದ್ದ ವೇಳೆ ರೈಲು ಹರಿದು ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಝಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ 9.30 ರ ಸುಮಾರಿಗೆ ಚೋಪನ್-ಪ್ರಯಾಗರಾಜ್ ಪ್ಯಾಸೆಂಜರ್...

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ...

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಪ.ಬಂಗಾಳದಲ್ಲಿ ‘ನರೇಗಾ’ ಪುನರಾರಂಭಕ್ಕೆ ಮುಂದಾದ ಕೇಂದ್ರ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್...

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್...

ಬಾಣಂತಿಯರ ಸಾವಿನಿಂದ ಎಚ್ಚೆತ್ತ ಸರ್ಕಾರ: ಜೀವರಕ್ಷಕ ಔಷಧಿ ಖರೀದಿಸಲು ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ಕೆಲವು ತಿಂಗಳ ಹಿಂದೆ ಬಳ್ಳಾರಿಯಲ್ಲಿ ಕಳಪೆ ಗುಣಮಟ್ಟದ IV ದ್ರವಗಳ ಬಳಕೆಯಿಂದ ಐದು ಯುವ ತಾಯಂದಿರು ಸಾವನ್ನಪ್ಪಿದ ನಂತರ, ರಾಜ್ಯ ಸರ್ಕಾರವು ತನ್ನ ಆಸ್ಪತ್ರೆಗಳಿಗೆ ಗುಣಮಟ್ಟದ ಜೀವರಕ್ಷಕ ಔಷಧಿಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು...

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ 25 ಲಕ್ಷ ಅಥವಾ ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 12ರಷ್ಟು 'ನಕಲಿ ಮತಗಳು' ಚಲಾವಣೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಬುಧವಾರ (ನ.5)...

ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಬಿಹಾರದಲ್ಲಿ ಮೊದಲ ಹಂತದ ಮತದಾನದ ಮುನ್ನಾ ದಿನವಾದ ಇಂದು (ನವೆಂಬರ್ 5, 2025) ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ 'ಮತಗಳ್ಳತನ' ನಡೆದಿದೆ ಎಂಬ 'ಹೈಡ್ರೋಜನ್ ಬಾಂಬ್'...

ಹೊನ್ನಾವರದ ಕಾರ್ಪೊರೇಟ್ ಬಂದರಿನ ಭೂತ ಚೇಷ್ಟೆಯೂ… ಬೆಸ್ತರಿಗೆ ಬೀದಿ ಪಾಲಾಗುವ ಭಯವೂ!!

(ಇದು ಮೊದಲು ನ್ಯಾಯಪಥ ಜುಲೈ ಸಂಚಿಕೆಯಲ್ಲಿ ಪ್ರಕಟವಾಗಿತ್ತು) ಉತ್ತರ ಕನ್ನಡವೆಂದರೆ ಸರಕಾರಿ ಯೋಜನೆಗಳ ಪ್ರಯೋಗಶಾಲೆ; ಇಲ್ಲಿಯ ಅಮಾಯಕ ಮಂದಿ ಸರಕಾರಿ ಯೋಜನೆಗಳ ಪ್ರಯೋಗಪಶುಗಳು. ಹಲವು ದಶಕಗಳಿಂದ ಉತ್ತರ ಕನ್ನಡದ ಜನರು ಒಂದಿಲ್ಲೊಂದು ಯೋಜನೆಗಾಗಿ ತಲೆತಲಾಂತರದಿಂದ...

ಮೊದಲ ಪತ್ನಿ ವಿರೋಧಿಸಿದರೆ ಮುಸ್ಲಿಂ ಪುರುಷರಿಗೆ ಎರಡನೇ ವಿವಾಹ ನೋಂದಣಿಗೆ ಅವಕಾಶವಿಲ್ಲ: ಕೇರಳ ಹೈಕೋರ್ಟ್

ಕೇರಳ ಹೈಕೋರ್ಟ್ ಇತ್ತೀಚೆಗೆ ಮುಸ್ಲಿಂ ಪುರುಷನ ಎರಡನೇ ವಿವಾಹವನ್ನು ಕೇರಳ ವಿವಾಹ ನೋಂದಣಿ (ಸಾಮಾನ್ಯ) ನಿಯಮಗಳು, 2008 ರ ಅಡಿಯಲ್ಲಿ, ಮೊದಲ ಪತ್ನಿಗೆ ತಿಳಿಸದೆ ಮತ್ತು ವಿಚಾರಣೆ ನಡೆಸದೆ ನೋಂದಾಯಿಸಲಾಗುವುದಿಲ್ಲ ಎಂದು ತೀರ್ಪು...

‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ

ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು...