Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...