Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...