Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...