Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...