Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...