Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...