Homeಮುಖಪುಟಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

ಆಹಾರದ ಹಣದುಬ್ಬರ ದರ 9.53%ಕ್ಕೆ ಏರಿಕೆ; ಕೈಗಾರಿಕಾ ಉತ್ಪಾದನೆಯಲ್ಲೂ ಕುಸಿತ

- Advertisement -
- Advertisement -

ಭಾರತದಲ್ಲಿ ಚಿಲ್ಲರೆ ಆಹಾರದ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದ್ದು, ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಅದೇ ಅವಧಿಯಲ್ಲಿ 0.88% ರಷ್ಟು ಅನುಕ್ರಮ ಕುಸಿತವನ್ನು ಕಂಡಿದೆ. ಡಿಸೆಂಬರ್ 2022ರ ವಾರ್ಷಿಕ ಆಹಾರ ಹಣದುಬ್ಬರವು 4.19% ರಷ್ಟಿತ್ತು ಎಂದು ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿನಬಳಕೆಯ ಆಹಾರ ಬುಟ್ಟಿಯಲ್ಲಿನ ಪದಾರ್ಥಗಳ ದರ ಏರಿಕೆಯಾಗುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆಯು ಶೇ 4.67ರಷ್ಟಿತ್ತು. ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ಶೇ 8.7ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ತಿಳಿಸಿತ್ತು. ನವೆಂಬರ್‌ನಲ್ಲೂ ಚಿಲ್ಲರೆ ಆಹಾರದ ಹಣದುಬ್ಬರ ದರವು 8.7% ರಷ್ಟಿತ್ತು, ಅದು ಡಿಸೆಂಬರ್‌ನಲ್ಲಿ 9.53%ಕ್ಕೆ ಏರಿಕೆಯಾಗಿದೆ. ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ನವೆಂಬರ್‌ನಲ್ಲಿ ಎಂಟು ತಿಂಗಳ ಕನಿಷ್ಠ 2.4%ಗೆ ಕುಸಿದಿದೆ.

ತರಕಾರಿಗಳ ಹಣದುಬ್ಬರದಲ್ಲಿ ಗಮನಾರ್ಹ ಏರಿಕೆಯಾಗಿದೆ. ನವೆಂಬರ್‌ನಲ್ಲಿ ಶೇ. 17.7ರಷ್ಟಿದ್ದ ಹಣದುಬ್ಬರ, ಡಿಸೆಂಬರ್‌ನಲ್ಲಿ ಶೇ. 27.64ಕ್ಕೆ ಹೆಚ್ಚಳವಾಗಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು CFPI ಆಗಸ್ಟ್‌ನಲ್ಲಿ 9.94%ರಷ್ಟಿತ್ತು ಸೆಪ್ಟೆಂಬರ್‌ನಲ್ಲಿ 6.62%ಕ್ಕೆ ಇಳಿದಿದೆ, ಪ್ರಾಥಮಿಕವಾಗಿ ಇದು ಟೊಮೆಟೊ ಬೆಲೆಗಳಿಂದ ಪ್ರಭಾವಿತವಾಗಿದೆ ಎಂದು ವರದಿಯಾಗಿದೆ.

ಚಿಲ್ಲರೆ ಈರುಳ್ಳಿ ಹಣದುಬ್ಬರವು ಡಿಸೆಂಬರ್‌ನಲ್ಲಿ 74.17% ರಷ್ಟು ಏರಿಕೆಯಾಯಿತು, ಹಲವಾರು ನಗರಗಳಲ್ಲಿ ಈರುಳ್ಳಿ ಕೆಜಿಗೆ 90ರೂ.ಗೆ ತಲುಪಿತ್ತು. ಇದು ರಫ್ತು ನಿಷೇಧವನ್ನು ವಿಧಿಸಲು ಸರ್ಕಾರವನ್ನು ಪ್ರೇರೇಪಿಸಿತು.  ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಕಾಲಿಕ ಮಳೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಆದರೆ ಈ ತಿಂಗಳ ಆರಂಭದಿಂದ ಈರುಳ್ಳಿ ಬೆಲೆಗಳಲ್ಲಿ ಕಡಿತವಾಗಿದೆ ಮತ್ತು ಈ ಕುಸಿತವು ಜನವರಿ 2024ರ ಹಣದುಬ್ಬರ ಅಂಕಿಅಂಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.

ದ್ವಿದಳ ಧಾನ್ಯಗಳ ಹಣದುಬ್ಬರವು ಡಿಸೆಂಬರ್‌ನಲ್ಲಿ 20.73% ಕ್ಕೆ ಏರಿಕೆಯಾಗಿದೆ. ಇದು ನವೆಂಬರ್‌ನಲ್ಲಿ 20.23% ರಷ್ಟಿತ್ತು. ಮಸಾಲೆ ಪದಾರ್ಥಗಳ ಹಣದುಬ್ಬರ ಶೇ. 19.69ರಷ್ಟಿದೆ. ಆದರೆ ತೈಲ ಮತ್ತು ಫ್ಯಾಟ್‌ ದರಗಳು ಶೇ. 14.96ರಷ್ಟು ಕಡಿಮೆಯಾಗಿದೆ. ಇಳಿಮುಖವಾಗುತ್ತಿರುವ ಉತ್ಪಾದನೆ ಮತ್ತು ಬೇಳೆಕಾಳುಗಳ ಬೇಡಿಕೆಯು ಹಣದುಬ್ಬರ ಏರಿಕೆಗೆ ಪ್ರಮುಖ ಅಂಶಗಳಾಗಿವೆ. ಒಟ್ಟಾರೆ ಧಾನ್ಯಗಳ ಹಣದುಬ್ಬರವು ನವೆಂಬರ್ 2023ರಲ್ಲಿ 10.27% ರಿಂದ ಡಿಸೆಂಬರ್‌ನಲ್ಲಿ 9.93% ಕ್ಕೆ ಇಳಿದಿದೆ. ಇದಕ್ಕೆ ಕಾರಣ ಗೋಧಿ ಬೆಲೆಯಲ್ಲಿ ಸ್ವಲ್ಪ ಇಳಿಮಖವಾಗಿರುವುದಾಗಿದೆ.

ಚಿಲ್ಲರೆ ಅಕ್ಕಿ ಬೆಲೆಗಳು ನವೆಂಬರ್‌ನಲ್ಲಿ 11.81%ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ 12.33% ರಷ್ಟು ಏರಿಕೆಯಾಗಿದೆ. ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧ ಮತ್ತು ಪಾರ್-ಬಾಯ್ಲ್ಡ್ ರೈಸ್ ಮೇಲೆ 20% ರಫ್ತು ಸುಂಕವನ್ನು ವಿಧಿಸುವ ಸರ್ಕಾರದ ಕ್ರಮಗಳು ಈ ಹೆಚ್ಚಳಕ್ಕೆ ಕಾರಣವಾಗಿವೆ. ಇಂಧನ ಹಣದುಬ್ಬರವು ನವೆಂಬರ್‌ನಲ್ಲಿ ಶೇ. 0.77ರಷ್ಟು ಕಡಿಮೆಯಾಗಿತ್ತು. ಡಿಸೆಂಬರ್‌ನಲ್ಲಿ ಇದು ಶೇ. 0.99ರಷ್ಟು ತಗ್ಗಿದೆ.

ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳಂತಹ ಕೆಲವು ವಸ್ತುಗಳ ಹಣದುಬ್ಬರ ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತದೆ. ಡಿಸೆಂಬರ್‌ 2023ರಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಗೆ ಆಹಾರ ಮತ್ತು ಪಾನೀಯಗಳ ದರ ಹೆಚ್ಚಳ ಪ್ರಮುಖ ಕಾರಣವಾಗಿದೆ. ಆಹಾರ ವಿಭಾಗದಲ್ಲಿ ತರಕಾರಿಗಳ ದರ ಹೆಚ್ಚಳ ಗಮನಾರ್ಹವಾಗಿದೆ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್‌ ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...