Homeಚಳವಳಿತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು - ಭುಗಿಲೆದ್ದ ಪ್ರತಿಭಟನೆ

ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಅಲ್ಲಿನ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದಿದ್ದು ಬೆಂಗಳೂರು ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರ್ ವಿಶೇಷ ಕೈಗಾರಿಕಾ ಪ್ರದೇಶದಲ್ಲಿ (SEZ) ನೆಲೆಗೊಂಡಿರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಹಿಳೆಯರು ಕ್ಯಾಂಟೀನ್ ನಲ್ಲಿ ವಿಷಪೂರಿತ ಆಹಾರ ಸೇವಿಸಿದ ನಂತರ ಅನಾರೋಗ್ಯಕ್ಕೀಡಾಗಿ ದುರ್ಮರಣ ಹೊಂದಿದ್ದಾರೆ. ಸಾವಿರಾರು ಮಹಿಳೆಯರ ಆರೋಗ್ಯ ಹದಗೆಟ್ಟಿದ್ದು ಕಂಪನಿಯ ನಿರ್ಲಕ್ಷ್ಯ ವಿರೋಧಿಸಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ.

ಭೀಕರ ದುರಂತ ಸಂಭವಿಸಿದ್ದರೂ ಕಂಪನಿ ಕಾರ್ಮಿಕರ ರಕ್ಷಣೆಯಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಅಲ್ಲಿನ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದಿದ್ದು ಬೆಂಗಳೂರು ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಮಹಿಳೆಯರ ಸಾವು ಸಂಭವಿಸಿದ್ದು, ಇನ್ನು ಹಲವರ ಆರೋಗ್ಯ ಹದಗೆಟ್ಟಿದೆ. ಕ್ಯಾಂಟೀನ್ ನಲ್ಲಿನ ವಿಷಪೂರಿತ ಆಹಾರ ಸೇವೆನೆಯೇ ಸಾವಿಗೆ ಕಾರಣವೆಂದು ದೂರಿರುವ ಕಾರ್ಮಿಕರು ಮಧ್ಯರಾತ್ರಿಯಿಂದಲೇ ಹೋರಾಟಕ್ಕಿಳಿದಿದ್ದಾರೆ.

ಶುಕ್ರವಾರ ಕಂಪನಿಯ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಿದ ನಂತರ 2000 ಮಹಿಳಾ ಕಾರ್ಮಿಕರ ಆರೋಗ್ಯ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಈ ಗಂಭೀರ ದರುಂತ ಹೊರಗೆ ಬಾರದಂತೆ ಹತ್ತಿಕ್ಕಲು ಕಂಪನಿ ಯತ್ನಿಸುತ್ತಿದೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಆರೋಪಿಸಿದ್ದಾರೆ.

ಈ ಮಹಿಳಾ ಕಾರ್ಮಿಕರ ಸಾವಿಗೆ ಆಹಾರ ವಿಷವೇ ಕಾರಣವಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕಂಪನಿಯು ಕೂಡಲೇ ಉಳಿದವರ ಆರೋಗ್ಯವನ್ನು ಕಾಪಾಡಬೇಕು, ನಿರ್ಲಕ್ಷ್ಯ ವಹಿಸಿದವರಿಗೆ ಶಿಕ್ಷೆಯಾಗಬೇಕು ಮತ್ತು ಸಾವಿಗೀಡಾವರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಮಧ್ಯರಾತ್ರಿ ಘಟನೆ ಬೆಳಕಿಗೆ ಬಂದ ನಂತರ, ಕಂಪನಿಯ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಆದರೆ ಆಡಳಿತ ಮಂಡಳಿಯಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬೆಂಗಳೂರು ಹೆದ್ದಾರಿಯನ್ನು ತಡೆಹಿಡಿಯಲಾಯಿತು ಎಂದು ಕಾರ್ಮಿಕರ ಹಕ್ಕುಗಳ ಪತ್ರಿಕೆ ವರ್ಕರ್ಸ್ ಯೂನಿಟಿ ವರದಿ ಮಾಡಿದೆ.

ಇಂತಹ ಘೋರ ದುರಂತವನ್ನು ಮಾಧ್ಯಮಗಳು ಏಕೆ ವರದಿ ಮಾಡುತ್ತಿಲ್ಲ? ಕಾರ್ಮಿಕರ ಜೀವಕ್ಕೆ ಬೆಲೆಯಿಲ್ಲವೇ? ಇಲ್ಲಿ ಮಹಿಳಾ ಕಾರ್ಮಿಕರು ಮರಣ ಹೊಂದಿದ್ದಾರೆ. ಅದರಲ್ಲಿ ಹಲವಾರು ಗರ್ಭಿಣಿಯರು ಸಹ ಇದ್ದರು. ಆದರೆ ಕಂಪನಿ ಅಮಾನಯವೀಯತೆಯಿಂದ ವರ್ತಿಸುತ್ತಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.


ಇದನ್ನೂ ಓದಿ; ಲಖಿಂಪುರ್‌ ಕೇರಿ ರೈತರ ಹತ್ಯಾಕಾಂಡ: ಸಚಿವರನ್ನು ವಜಾಗೊಳಿಸುವಂತೆ ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...