Homeಚಳವಳಿತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು - ಭುಗಿಲೆದ್ದ ಪ್ರತಿಭಟನೆ

ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಅಲ್ಲಿನ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದಿದ್ದು ಬೆಂಗಳೂರು ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರ್ ವಿಶೇಷ ಕೈಗಾರಿಕಾ ಪ್ರದೇಶದಲ್ಲಿ (SEZ) ನೆಲೆಗೊಂಡಿರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಹಿಳೆಯರು ಕ್ಯಾಂಟೀನ್ ನಲ್ಲಿ ವಿಷಪೂರಿತ ಆಹಾರ ಸೇವಿಸಿದ ನಂತರ ಅನಾರೋಗ್ಯಕ್ಕೀಡಾಗಿ ದುರ್ಮರಣ ಹೊಂದಿದ್ದಾರೆ. ಸಾವಿರಾರು ಮಹಿಳೆಯರ ಆರೋಗ್ಯ ಹದಗೆಟ್ಟಿದ್ದು ಕಂಪನಿಯ ನಿರ್ಲಕ್ಷ್ಯ ವಿರೋಧಿಸಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ.

ಭೀಕರ ದುರಂತ ಸಂಭವಿಸಿದ್ದರೂ ಕಂಪನಿ ಕಾರ್ಮಿಕರ ರಕ್ಷಣೆಯಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಅಲ್ಲಿನ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದಿದ್ದು ಬೆಂಗಳೂರು ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಮಹಿಳೆಯರ ಸಾವು ಸಂಭವಿಸಿದ್ದು, ಇನ್ನು ಹಲವರ ಆರೋಗ್ಯ ಹದಗೆಟ್ಟಿದೆ. ಕ್ಯಾಂಟೀನ್ ನಲ್ಲಿನ ವಿಷಪೂರಿತ ಆಹಾರ ಸೇವೆನೆಯೇ ಸಾವಿಗೆ ಕಾರಣವೆಂದು ದೂರಿರುವ ಕಾರ್ಮಿಕರು ಮಧ್ಯರಾತ್ರಿಯಿಂದಲೇ ಹೋರಾಟಕ್ಕಿಳಿದಿದ್ದಾರೆ.

ಶುಕ್ರವಾರ ಕಂಪನಿಯ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸಿದ ನಂತರ 2000 ಮಹಿಳಾ ಕಾರ್ಮಿಕರ ಆರೋಗ್ಯ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಈ ಗಂಭೀರ ದರುಂತ ಹೊರಗೆ ಬಾರದಂತೆ ಹತ್ತಿಕ್ಕಲು ಕಂಪನಿ ಯತ್ನಿಸುತ್ತಿದೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಆರೋಪಿಸಿದ್ದಾರೆ.

ಈ ಮಹಿಳಾ ಕಾರ್ಮಿಕರ ಸಾವಿಗೆ ಆಹಾರ ವಿಷವೇ ಕಾರಣವಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕಂಪನಿಯು ಕೂಡಲೇ ಉಳಿದವರ ಆರೋಗ್ಯವನ್ನು ಕಾಪಾಡಬೇಕು, ನಿರ್ಲಕ್ಷ್ಯ ವಹಿಸಿದವರಿಗೆ ಶಿಕ್ಷೆಯಾಗಬೇಕು ಮತ್ತು ಸಾವಿಗೀಡಾವರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಮಧ್ಯರಾತ್ರಿ ಘಟನೆ ಬೆಳಕಿಗೆ ಬಂದ ನಂತರ, ಕಂಪನಿಯ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಆದರೆ ಆಡಳಿತ ಮಂಡಳಿಯಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬೆಂಗಳೂರು ಹೆದ್ದಾರಿಯನ್ನು ತಡೆಹಿಡಿಯಲಾಯಿತು ಎಂದು ಕಾರ್ಮಿಕರ ಹಕ್ಕುಗಳ ಪತ್ರಿಕೆ ವರ್ಕರ್ಸ್ ಯೂನಿಟಿ ವರದಿ ಮಾಡಿದೆ.

ಇಂತಹ ಘೋರ ದುರಂತವನ್ನು ಮಾಧ್ಯಮಗಳು ಏಕೆ ವರದಿ ಮಾಡುತ್ತಿಲ್ಲ? ಕಾರ್ಮಿಕರ ಜೀವಕ್ಕೆ ಬೆಲೆಯಿಲ್ಲವೇ? ಇಲ್ಲಿ ಮಹಿಳಾ ಕಾರ್ಮಿಕರು ಮರಣ ಹೊಂದಿದ್ದಾರೆ. ಅದರಲ್ಲಿ ಹಲವಾರು ಗರ್ಭಿಣಿಯರು ಸಹ ಇದ್ದರು. ಆದರೆ ಕಂಪನಿ ಅಮಾನಯವೀಯತೆಯಿಂದ ವರ್ತಿಸುತ್ತಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.


ಇದನ್ನೂ ಓದಿ; ಲಖಿಂಪುರ್‌ ಕೇರಿ ರೈತರ ಹತ್ಯಾಕಾಂಡ: ಸಚಿವರನ್ನು ವಜಾಗೊಳಿಸುವಂತೆ ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...