Homeಮುಖಪುಟಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಯುದ್ಧ ಎಂದರೆ ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದ ಸೇನೆಯ ಮಾಜಿ ಮುಖ್ಯಸ್ಥ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ 

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ದಾಳಿ ಮತ್ತು ನಂತರ ನಾಲ್ಕು ದಿನಗಳ ತೀವ್ರ ಸಂಘರ್ಷ ಆರಂಭವಾದ ಈ ವಾರವು ಪ್ರಕ್ಷುಬ್ಧ ವಾರವಾಗಿದೆ ಎಂದು ನರವಾಣೆ ಹೇಳಿದ್ದಾರೆ.

“ಈ ಸಂಘರ್ಷ ಅಂತಿಮವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಘೋಷಣೆಯಲ್ಲಿ ಕೊನೆಗೊಂಡಿತು. ಇದು ಕೇವಲ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯಾಗಿದೆ, ಕದನ ವಿರಾಮವಲ್ಲ ಎಂಬುವುದನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಮುಂಬರುವ ದಿನಗಳು ಮತ್ತು ವಾರಗಳಲ್ಲಿ ಏನಾಗುತ್ತದೆ ಎಂಬುವುದು ವೀಕ್ಷಿಸಿ” ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಯುದ್ಧವನ್ನು ಸ್ಥಗಿತಗೊಳಿಸುವುದರ ವಿರುದ್ಧ ಹಲವಾರು ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿದ ಅವರು, “ಅಂಕಿಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಯುದ್ಧದ ವೆಚ್ಚವನ್ನು ಪರಿಗಣಿಸಿದರೆ, ನಷ್ಟಗಳು ತುಂಬಾ ದೊಡ್ಡದಾಗುತ್ತದೆ ಅಥವಾ ದುಸ್ತರವಾಗುತ್ತದೆ. ಅದಕ್ಕೂ ಮೊದಲು ಬುದ್ಧಿವಂತ ವ್ಯಕ್ತಿ ಯುದ್ಧ ನಿಲ್ಲುಸುವ ಕರೆಯನ್ನು ನೀಡುತ್ತಾರೆ ಎಂದು ಅರಿತುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ಮಾತ್ರವಲ್ಲದೆ ಅವರ ಪ್ರದೇಶದೊಳಗಿನ ಅವರ ವಾಯುನೆಲೆಗಳ ಮೇಲೂ ನಾವು ನಡೆಸಿದ ದಾಳಿಗಳ ಮೂಲಕ, ಈ ಹಾದಿಯಲ್ಲಿ ಮುಂದುವರಿದರೆ ಅದರ ಬೆಲೆ ತುಂಬಾ ಹೆಚ್ಚಾಗಿರುತ್ತದೆ ಎಂದು ನಾವು ಪಾಕಿಸ್ತಾನಕ್ಕೆ ಸಾಬೀತುಪಡಿಸಿದ್ದೇವೆ ಎಂದು ನಾನು ನಂಬುತ್ತೇನೆ. ಹಾಗಾಗಿಯೆ ಅಂತಿಮವಾಗಿ ಅವರ ಡಿಜಿಎಂಒ ಕದನ ವಿರಾಮದ ಸಾಧ್ಯತೆಯ ಬಗ್ಗೆ ಚರ್ಚಿಸಲು ನಮ್ಮದನ್ನು ಕರೆಯುವಂತೆ ಮಾಡಿತು” ಎಂದು ಅವರು ಹೇಳಿದ್ದಾರೆ.

“ನಾನು ಶಕ್ತಿ ಮತ್ತು ವಿನಾಶವನ್ನು ಉಲ್ಲೇಖಿಸಿದೆ, ಆದರೆ ಸಾಮಾಜಿಕವಾಗಿ ಕಳೆದುಹೋದ ಜೀವಗಳ ಬಗ್ಗೆ ಕೂಡಾ ಹೇಳಬೇಕಿದೆ. ದಾಳಿಯಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಳ್ಳುವ ಅಥವಾ ಗಡಿ ಪ್ರದೇಶಗಳಲ್ಲಿ ಶೆಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಕ್ಕಳ ಬಗ್ಗೆ ಮಾತಾಡಬೇಕಿದೆ. ಆದರೆ, ಈ ರೀತಿಯ ವಿನಾಶವನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ಆದರೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಈ ಆಘಾತವು ತಲೆಮಾರುಗಳವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

“ಪಿಟಿಎಸ್‌ಡಿ (ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್) ಎಂಬುದೂ ಇದೆ. ಭಯಾನಕ ದೃಶ್ಯಗಳನ್ನು ನೋಡಿದ ಜನರು 20 ವರ್ಷಗಳ ನಂತರವೂ ಚಳಿಯಲ್ಲೂ ಬೆವರುತ್ತಾರೆ, ಅಂತಹ ಜನರಿಗೆ ಮನೋವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದ್ದಾರೆ.

“ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ. ಇದು ನಿಮ್ಮ ಬಾಲಿವುಡ್ ಸಿನಿಮಾ ಅಲ್ಲ. ಇದು ತುಂಬಾ ಗಂಭೀರವಾದ ವ್ಯವಹಾರ. ಯುದ್ಧ ಅಥವಾ ಹಿಂಸೆಯನ್ನು ನಾವು ಕೊನೆಯ ಅಸ್ತ್ರವಗಿ ಬಳಸಬೇಕು. ಅದಕ್ಕಾಗಿಯೇ ನಮ್ಮ ಪ್ರಧಾನಿ ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದಾರೆ. ಅವಿವೇಕಿ ಜನರು ಯುದ್ಧ ಮಾಡಲು ನಮ್ಮನ್ನು ಬಲವಂತಪಡಿಸಿದರೂ, ನಾವು ಅದಕ್ಕಾಗಿ ಬೆಂಬಲ ವ್ಯಕ್ತಪಡಿಸಬಾರದು” ಎಂದು ಅವರು ಹೇಳಿದ್ದಾರೆ.

“ಆದರೂ, ಪೂರ್ಣ ಪ್ರಮಾಣದ ಯುದ್ಧಕ್ಕೆ ನಾವು ಏಕೆ ಹೋಗಿಲ್ಲ ಎಂದು ಜನರು ಕೇಳುತ್ತಿದ್ದಾರೆ. ಒಬ್ಬ ಮಿಲಿಟರಿ ವ್ಯಕ್ತಿಯಾಗಿ, ಸರ್ಕಾರ ಆದೇಶಿಸಿದರೆ, ನಾನು ಯುದ್ಧಕ್ಕೆ ಹೋಗುತ್ತೇನೆ. ಆದರೆ ಅದು ನನ್ನ ಮೊದಲ ಆಯ್ಕೆಯಾಗಿರುವುದಿಲ್ಲ” ಎಂದು ಮಾಜಿ ಭಾರತೀಯ ಸೇನಾ ಮುಖ್ಯಸ್ಥರೂ ಆಗಿರುವ ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ರಾಜತಾಂತ್ರಿಕತೆಯನ್ನು ಆರಿಸಿಕೊಳ್ಳುವುದಾಗಿ ಅವರು ಹೇಳಿದ್ದು, ಸಂವಾದದ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿದರೆ ಸಶಸ್ತ್ರ ಸಂಘರ್ಷದ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯಲ್ಲಿ ನಾವೆಲ್ಲರೂ ಸಮಾನ ಪಾಲುದಾರರು. ದೇಶಗಳ ನಡುವೆ ಮಾತ್ರವಲ್ಲದೆ, ಕುಟುಂಬಗಳಲ್ಲಿ ಅಥವಾ ರಾಜ್ಯಗಳು, ಪ್ರದೇಶಗಳು ಮತ್ತು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ನಾವು ಪ್ರಯತ್ನಿಸಬೇಕು. ಯಾವುದಕ್ಕೂ ಹಿಂಸಾಚಾರ ಉತ್ತರವಲ್ಲ” ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...