Homeಮುಖಪುಟಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಯುದ್ಧ ಎಂದರೆ ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದ ಸೇನೆಯ ಮಾಜಿ ಮುಖ್ಯಸ್ಥ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ 

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ದಾಳಿ ಮತ್ತು ನಂತರ ನಾಲ್ಕು ದಿನಗಳ ತೀವ್ರ ಸಂಘರ್ಷ ಆರಂಭವಾದ ಈ ವಾರವು ಪ್ರಕ್ಷುಬ್ಧ ವಾರವಾಗಿದೆ ಎಂದು ನರವಾಣೆ ಹೇಳಿದ್ದಾರೆ.

“ಈ ಸಂಘರ್ಷ ಅಂತಿಮವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಘೋಷಣೆಯಲ್ಲಿ ಕೊನೆಗೊಂಡಿತು. ಇದು ಕೇವಲ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯಾಗಿದೆ, ಕದನ ವಿರಾಮವಲ್ಲ ಎಂಬುವುದನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಮುಂಬರುವ ದಿನಗಳು ಮತ್ತು ವಾರಗಳಲ್ಲಿ ಏನಾಗುತ್ತದೆ ಎಂಬುವುದು ವೀಕ್ಷಿಸಿ” ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಯುದ್ಧವನ್ನು ಸ್ಥಗಿತಗೊಳಿಸುವುದರ ವಿರುದ್ಧ ಹಲವಾರು ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿದ ಅವರು, “ಅಂಕಿಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಯುದ್ಧದ ವೆಚ್ಚವನ್ನು ಪರಿಗಣಿಸಿದರೆ, ನಷ್ಟಗಳು ತುಂಬಾ ದೊಡ್ಡದಾಗುತ್ತದೆ ಅಥವಾ ದುಸ್ತರವಾಗುತ್ತದೆ. ಅದಕ್ಕೂ ಮೊದಲು ಬುದ್ಧಿವಂತ ವ್ಯಕ್ತಿ ಯುದ್ಧ ನಿಲ್ಲುಸುವ ಕರೆಯನ್ನು ನೀಡುತ್ತಾರೆ ಎಂದು ಅರಿತುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ಮಾತ್ರವಲ್ಲದೆ ಅವರ ಪ್ರದೇಶದೊಳಗಿನ ಅವರ ವಾಯುನೆಲೆಗಳ ಮೇಲೂ ನಾವು ನಡೆಸಿದ ದಾಳಿಗಳ ಮೂಲಕ, ಈ ಹಾದಿಯಲ್ಲಿ ಮುಂದುವರಿದರೆ ಅದರ ಬೆಲೆ ತುಂಬಾ ಹೆಚ್ಚಾಗಿರುತ್ತದೆ ಎಂದು ನಾವು ಪಾಕಿಸ್ತಾನಕ್ಕೆ ಸಾಬೀತುಪಡಿಸಿದ್ದೇವೆ ಎಂದು ನಾನು ನಂಬುತ್ತೇನೆ. ಹಾಗಾಗಿಯೆ ಅಂತಿಮವಾಗಿ ಅವರ ಡಿಜಿಎಂಒ ಕದನ ವಿರಾಮದ ಸಾಧ್ಯತೆಯ ಬಗ್ಗೆ ಚರ್ಚಿಸಲು ನಮ್ಮದನ್ನು ಕರೆಯುವಂತೆ ಮಾಡಿತು” ಎಂದು ಅವರು ಹೇಳಿದ್ದಾರೆ.

“ನಾನು ಶಕ್ತಿ ಮತ್ತು ವಿನಾಶವನ್ನು ಉಲ್ಲೇಖಿಸಿದೆ, ಆದರೆ ಸಾಮಾಜಿಕವಾಗಿ ಕಳೆದುಹೋದ ಜೀವಗಳ ಬಗ್ಗೆ ಕೂಡಾ ಹೇಳಬೇಕಿದೆ. ದಾಳಿಯಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಳ್ಳುವ ಅಥವಾ ಗಡಿ ಪ್ರದೇಶಗಳಲ್ಲಿ ಶೆಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಕ್ಕಳ ಬಗ್ಗೆ ಮಾತಾಡಬೇಕಿದೆ. ಆದರೆ, ಈ ರೀತಿಯ ವಿನಾಶವನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ಆದರೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಈ ಆಘಾತವು ತಲೆಮಾರುಗಳವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

“ಪಿಟಿಎಸ್‌ಡಿ (ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್) ಎಂಬುದೂ ಇದೆ. ಭಯಾನಕ ದೃಶ್ಯಗಳನ್ನು ನೋಡಿದ ಜನರು 20 ವರ್ಷಗಳ ನಂತರವೂ ಚಳಿಯಲ್ಲೂ ಬೆವರುತ್ತಾರೆ, ಅಂತಹ ಜನರಿಗೆ ಮನೋವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದ್ದಾರೆ.

“ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ. ಇದು ನಿಮ್ಮ ಬಾಲಿವುಡ್ ಸಿನಿಮಾ ಅಲ್ಲ. ಇದು ತುಂಬಾ ಗಂಭೀರವಾದ ವ್ಯವಹಾರ. ಯುದ್ಧ ಅಥವಾ ಹಿಂಸೆಯನ್ನು ನಾವು ಕೊನೆಯ ಅಸ್ತ್ರವಗಿ ಬಳಸಬೇಕು. ಅದಕ್ಕಾಗಿಯೇ ನಮ್ಮ ಪ್ರಧಾನಿ ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದಾರೆ. ಅವಿವೇಕಿ ಜನರು ಯುದ್ಧ ಮಾಡಲು ನಮ್ಮನ್ನು ಬಲವಂತಪಡಿಸಿದರೂ, ನಾವು ಅದಕ್ಕಾಗಿ ಬೆಂಬಲ ವ್ಯಕ್ತಪಡಿಸಬಾರದು” ಎಂದು ಅವರು ಹೇಳಿದ್ದಾರೆ.

“ಆದರೂ, ಪೂರ್ಣ ಪ್ರಮಾಣದ ಯುದ್ಧಕ್ಕೆ ನಾವು ಏಕೆ ಹೋಗಿಲ್ಲ ಎಂದು ಜನರು ಕೇಳುತ್ತಿದ್ದಾರೆ. ಒಬ್ಬ ಮಿಲಿಟರಿ ವ್ಯಕ್ತಿಯಾಗಿ, ಸರ್ಕಾರ ಆದೇಶಿಸಿದರೆ, ನಾನು ಯುದ್ಧಕ್ಕೆ ಹೋಗುತ್ತೇನೆ. ಆದರೆ ಅದು ನನ್ನ ಮೊದಲ ಆಯ್ಕೆಯಾಗಿರುವುದಿಲ್ಲ” ಎಂದು ಮಾಜಿ ಭಾರತೀಯ ಸೇನಾ ಮುಖ್ಯಸ್ಥರೂ ಆಗಿರುವ ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ರಾಜತಾಂತ್ರಿಕತೆಯನ್ನು ಆರಿಸಿಕೊಳ್ಳುವುದಾಗಿ ಅವರು ಹೇಳಿದ್ದು, ಸಂವಾದದ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿದರೆ ಸಶಸ್ತ್ರ ಸಂಘರ್ಷದ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯಲ್ಲಿ ನಾವೆಲ್ಲರೂ ಸಮಾನ ಪಾಲುದಾರರು. ದೇಶಗಳ ನಡುವೆ ಮಾತ್ರವಲ್ಲದೆ, ಕುಟುಂಬಗಳಲ್ಲಿ ಅಥವಾ ರಾಜ್ಯಗಳು, ಪ್ರದೇಶಗಳು ಮತ್ತು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ನಾವು ಪ್ರಯತ್ನಿಸಬೇಕು. ಯಾವುದಕ್ಕೂ ಹಿಂಸಾಚಾರ ಉತ್ತರವಲ್ಲ” ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...