Homeಮುಖಪುಟಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಯುದ್ಧ ಎಂದರೆ ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದ ಸೇನೆಯ ಮಾಜಿ ಮುಖ್ಯಸ್ಥ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ 

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ದಾಳಿ ಮತ್ತು ನಂತರ ನಾಲ್ಕು ದಿನಗಳ ತೀವ್ರ ಸಂಘರ್ಷ ಆರಂಭವಾದ ಈ ವಾರವು ಪ್ರಕ್ಷುಬ್ಧ ವಾರವಾಗಿದೆ ಎಂದು ನರವಾಣೆ ಹೇಳಿದ್ದಾರೆ.

“ಈ ಸಂಘರ್ಷ ಅಂತಿಮವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಘೋಷಣೆಯಲ್ಲಿ ಕೊನೆಗೊಂಡಿತು. ಇದು ಕೇವಲ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯಾಗಿದೆ, ಕದನ ವಿರಾಮವಲ್ಲ ಎಂಬುವುದನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಮುಂಬರುವ ದಿನಗಳು ಮತ್ತು ವಾರಗಳಲ್ಲಿ ಏನಾಗುತ್ತದೆ ಎಂಬುವುದು ವೀಕ್ಷಿಸಿ” ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಯುದ್ಧವನ್ನು ಸ್ಥಗಿತಗೊಳಿಸುವುದರ ವಿರುದ್ಧ ಹಲವಾರು ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿದ ಅವರು, “ಅಂಕಿಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಯುದ್ಧದ ವೆಚ್ಚವನ್ನು ಪರಿಗಣಿಸಿದರೆ, ನಷ್ಟಗಳು ತುಂಬಾ ದೊಡ್ಡದಾಗುತ್ತದೆ ಅಥವಾ ದುಸ್ತರವಾಗುತ್ತದೆ. ಅದಕ್ಕೂ ಮೊದಲು ಬುದ್ಧಿವಂತ ವ್ಯಕ್ತಿ ಯುದ್ಧ ನಿಲ್ಲುಸುವ ಕರೆಯನ್ನು ನೀಡುತ್ತಾರೆ ಎಂದು ಅರಿತುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ಮಾತ್ರವಲ್ಲದೆ ಅವರ ಪ್ರದೇಶದೊಳಗಿನ ಅವರ ವಾಯುನೆಲೆಗಳ ಮೇಲೂ ನಾವು ನಡೆಸಿದ ದಾಳಿಗಳ ಮೂಲಕ, ಈ ಹಾದಿಯಲ್ಲಿ ಮುಂದುವರಿದರೆ ಅದರ ಬೆಲೆ ತುಂಬಾ ಹೆಚ್ಚಾಗಿರುತ್ತದೆ ಎಂದು ನಾವು ಪಾಕಿಸ್ತಾನಕ್ಕೆ ಸಾಬೀತುಪಡಿಸಿದ್ದೇವೆ ಎಂದು ನಾನು ನಂಬುತ್ತೇನೆ. ಹಾಗಾಗಿಯೆ ಅಂತಿಮವಾಗಿ ಅವರ ಡಿಜಿಎಂಒ ಕದನ ವಿರಾಮದ ಸಾಧ್ಯತೆಯ ಬಗ್ಗೆ ಚರ್ಚಿಸಲು ನಮ್ಮದನ್ನು ಕರೆಯುವಂತೆ ಮಾಡಿತು” ಎಂದು ಅವರು ಹೇಳಿದ್ದಾರೆ.

“ನಾನು ಶಕ್ತಿ ಮತ್ತು ವಿನಾಶವನ್ನು ಉಲ್ಲೇಖಿಸಿದೆ, ಆದರೆ ಸಾಮಾಜಿಕವಾಗಿ ಕಳೆದುಹೋದ ಜೀವಗಳ ಬಗ್ಗೆ ಕೂಡಾ ಹೇಳಬೇಕಿದೆ. ದಾಳಿಯಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಳ್ಳುವ ಅಥವಾ ಗಡಿ ಪ್ರದೇಶಗಳಲ್ಲಿ ಶೆಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಕ್ಕಳ ಬಗ್ಗೆ ಮಾತಾಡಬೇಕಿದೆ. ಆದರೆ, ಈ ರೀತಿಯ ವಿನಾಶವನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ಆದರೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಈ ಆಘಾತವು ತಲೆಮಾರುಗಳವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

“ಪಿಟಿಎಸ್‌ಡಿ (ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್) ಎಂಬುದೂ ಇದೆ. ಭಯಾನಕ ದೃಶ್ಯಗಳನ್ನು ನೋಡಿದ ಜನರು 20 ವರ್ಷಗಳ ನಂತರವೂ ಚಳಿಯಲ್ಲೂ ಬೆವರುತ್ತಾರೆ, ಅಂತಹ ಜನರಿಗೆ ಮನೋವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದ್ದಾರೆ.

“ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ. ಇದು ನಿಮ್ಮ ಬಾಲಿವುಡ್ ಸಿನಿಮಾ ಅಲ್ಲ. ಇದು ತುಂಬಾ ಗಂಭೀರವಾದ ವ್ಯವಹಾರ. ಯುದ್ಧ ಅಥವಾ ಹಿಂಸೆಯನ್ನು ನಾವು ಕೊನೆಯ ಅಸ್ತ್ರವಗಿ ಬಳಸಬೇಕು. ಅದಕ್ಕಾಗಿಯೇ ನಮ್ಮ ಪ್ರಧಾನಿ ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದಾರೆ. ಅವಿವೇಕಿ ಜನರು ಯುದ್ಧ ಮಾಡಲು ನಮ್ಮನ್ನು ಬಲವಂತಪಡಿಸಿದರೂ, ನಾವು ಅದಕ್ಕಾಗಿ ಬೆಂಬಲ ವ್ಯಕ್ತಪಡಿಸಬಾರದು” ಎಂದು ಅವರು ಹೇಳಿದ್ದಾರೆ.

“ಆದರೂ, ಪೂರ್ಣ ಪ್ರಮಾಣದ ಯುದ್ಧಕ್ಕೆ ನಾವು ಏಕೆ ಹೋಗಿಲ್ಲ ಎಂದು ಜನರು ಕೇಳುತ್ತಿದ್ದಾರೆ. ಒಬ್ಬ ಮಿಲಿಟರಿ ವ್ಯಕ್ತಿಯಾಗಿ, ಸರ್ಕಾರ ಆದೇಶಿಸಿದರೆ, ನಾನು ಯುದ್ಧಕ್ಕೆ ಹೋಗುತ್ತೇನೆ. ಆದರೆ ಅದು ನನ್ನ ಮೊದಲ ಆಯ್ಕೆಯಾಗಿರುವುದಿಲ್ಲ” ಎಂದು ಮಾಜಿ ಭಾರತೀಯ ಸೇನಾ ಮುಖ್ಯಸ್ಥರೂ ಆಗಿರುವ ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ರಾಜತಾಂತ್ರಿಕತೆಯನ್ನು ಆರಿಸಿಕೊಳ್ಳುವುದಾಗಿ ಅವರು ಹೇಳಿದ್ದು, ಸಂವಾದದ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿದರೆ ಸಶಸ್ತ್ರ ಸಂಘರ್ಷದ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯಲ್ಲಿ ನಾವೆಲ್ಲರೂ ಸಮಾನ ಪಾಲುದಾರರು. ದೇಶಗಳ ನಡುವೆ ಮಾತ್ರವಲ್ಲದೆ, ಕುಟುಂಬಗಳಲ್ಲಿ ಅಥವಾ ರಾಜ್ಯಗಳು, ಪ್ರದೇಶಗಳು ಮತ್ತು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ನಾವು ಪ್ರಯತ್ನಿಸಬೇಕು. ಯಾವುದಕ್ಕೂ ಹಿಂಸಾಚಾರ ಉತ್ತರವಲ್ಲ” ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...