Homeಕರ್ನಾಟಕಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

- Advertisement -
- Advertisement -

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಊರಾದ ಸಿದ್ದರಾಮನಹುಂಡಿಯಿಂದ ಬೆಳಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ, ‘ಒಳಮೀಸಲಾತಿ ಜಾರಿಗೊಳಿಸಿ, ಇಲ್ಲ ಕುರ್ಚಿ ಖಾಲಿ ಮಾಡಿ’ ಘೋಷಣೆಯೊಂದಿಗೆ ಸಾಗಲಿದೆ. ಬಳಿಕ ಟಿ. ನರಸೀಪುರ, ಬನ್ನೂರು, ವ್ಯಾಸರಾಯನಪುರ ಮೂಲಕ ಮೈಸೂರಿನ ಕಡೆಗೆ ತೆರಳಲಿರುವ ಜಾಥಾ ಡಿಸೆಂಬರ್ 11ರಂದು ಮೈಸೂರಿಗೆ ತಲುಪಿ, ಅಪರಾಹ್ನ 12ಕ್ಕೆ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಪೂರ್ಣಪ್ರಮಾಣದ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳದೆ ಇದ್ದರೆ ಎರಡನೇ ಹಂತದ ಹೋರಾಟವಾಗಿ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಎಸ್. ಮಾರೆಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತಿದ್ದಾರೆ. ಹೀಗಾಗಿ, ಸಂಬಂಧಪಟ್ಟವರನ್ನು ವರ್ಗಾಯಿಸಬೇಕು ಸಾಮಾಜಿಕ ನ್ಯಾಯ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಗೂರು ಸಿದ್ದರಾಜು, ಕನಕನಹಳ್ಳಿ ಕೃಷ್ಣಪ್ಪ, ರಾಜಣ್ಣ ದಂಡೋರ, ಬಸಪ್ಪ ಲಿಡ್ಕರ್, ಸ್ವಾಮಿ ಮೈಸೂರು, ವೆಂಕಟರಾಮು, ಆನಂದಕುಮಾರ್, ಹನುಮೇಶ್ ಗುಂಡೂರು, ಹುಣಸೂರು ಪುಟ್ಟಯ್ಯ ಇದ್ದರು.

ಹಕ್ಕೊತ್ತಾಯಗಳು:

ಶೈಕ್ಷಣಿಕ ಕ್ಷೇತ್ರವಾದ ಉನ್ನತ ಶಿಕ್ಷಣ ಸೇರಿದಂತೆ ಎಲ್ಲಾ ಶೈಕ್ಷಣಿಕ ರಂಗಗಳಲ್ಲಿ ಒಳಮೀಸಲಾತಿಯನ್ನು ಅನ್ವಯಿಸಬೇಕು ಮತ್ತು ಕೂಡಲೇ, ಕಂದಾಯ ಇಲಾಖೆಯು ಪರಿಶಿಷ್ಟ ಜಾತಿಗಳ ಪ್ರವರ್ಗವಾರು ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 15(4) ರಂತೆ ಶೇ.6: 6: 5 ನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿಗಳ ಒಳಮೀಸಲಾತಿಯನ್ನು ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅರೆಸರಕಾರಿ ಹುದ್ದೆಗಳ ನೇರನೇಮಕಾತಿ, ಬಡ್ತಿ, ಬ್ಲಾಕ್‌ಲಾಗ್ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 16(4), 16 (4ಎ)- ಸಂವಿಧಾನ 77ನೇ ತಿದ್ದುಪಡಿ ಕಾಯ್ದೆ 1995 ರಂತೆ ಶೇ.6: 6: 5 ಅನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿ ಉಪ ಹಂಚಿಕೆ ಹಣದಲ್ಲೂ ಒಳಮೀಸಲಾತಿ ಶೇ.6: 6: 5 ಅನುಪಾತದಂತೆ ಆದೇಶ ಮಾಡಿ ಜಾರಿಗೊಳಿಸಬೇಕು. ಉಪಹಂಚಿಕೆ ಕಾಯ್ದೆ ಕಲಂ 7.(ಬಿ), 7 (ಸಿ) ಯನ್ನು ಕೂಡಲೆ ರದ್ದುಪಡಿಸಬೇಕು. (ಸಂವಿಧಾನ ಪರಿಚ್ಛೇದ 16(4) – ಆರ್ಥಿಕ ಸಬಲೀಕರಣಕ್ಕೆ ಸಮಾನ ಅವಕಾಶಗಳು, ಪರಿಶಿಷ್ಟ ಜಾತಿಗಳ ಉಪಯೋಜನೆ ಕಾಯ್ದೆ 2013 ರಂತೆ ಕೆಳ ಮಟ್ಟದ ಆದಾಯ ವರ್ಗವಾದ ಪರಿಶಿಷ್ಟ ಜಾತಿಗಳು ರೂ. 2.50 ಲಕ್ಷ ಆದಾಯ ತಲುಪಲು ಉದ್ದೇಶಿಸಲಾಗಿದ್ದು, ಮಧ್ಯಮ ವರ್ಗದ ಆದಾಯ ರೂ. 5.00 ಲಕ್ಷ ತಲುಪುವ ಗುರಿ ಹೊಂದಿದೆ. ಅದ್ದರಿಂದ ಪರಿಶಿಷ್ಟ ಜಾತಿ ಸಮುದಾಯಗಳು ಕಡಿಮೆ ಆದಾಯ ಹೊಂದಿರುವ ವರ್ಗವಾದ್ದರಿಂದ ಉಪಯೋಜನೆ ಹಣವನ್ನು ಶೇ.6.6:5 ಅನುಪಾತದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಸಮಂಜಸವಾಗಿದೆ)

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. (ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮೂರು (3) ಹಂತದ ಸ್ಥಳೀಯ ಸ್ವಂತ ಸರಕಾರ ರಚನೆ, ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪ.ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸಿದೆ. 1992 ರ ಇಂದಿರಾ ಸಹಾನಿ ತೀರ್ಪಿನಲ್ಲಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಮೀಸಲಾತಿ ನಿಗದಿಪಡಿಸಲಾಗಿತ್ತು. ಆದರೆ, ಪಂಚಾಯತ್ ಕಾಯ್ದೆ 1993 ಹಿಂದುಳಿದವರಿಗೂ ಸ್ಥಳೀಯ ಚುನಾವಣೆಗಳಲ್ಲಿ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಜಾರಿಗೊಳಿಸಿದಂತೆ, ಪ.ಜಾತಿಗಳಿಗೆ ಶೇ.6: 65 ಅನುಪಾತದಂತೆ ಪ್ರವರ್ಗವಾರು ಒಳಮೀಸಲಾತಿ ಜಾರಿಗೊಳಿಸುವುದು ನ್ಯಾಯಯುತ, ಸಮಂಜಸವಾಗಿದೆ)

ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಲು ಪ್ರವರ್ಗ -ಎ ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕು. (ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಬಹುದೆಂದು ಸರಕಾರ ದಿ-25-08-2025 ರಂದು ಆದೇಶಿಸಿದೆ. ಕಡಿಮೆ ಮೆರಿಟ್ ವರ್ಗವಾದ ಪ್ರವರ್ಗ-ಎ ಗೆ, ಮಾದಿಗರಲ್ಲದ ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಬಿ ಸೇರಿದಂತೆ ಯಾರಾದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪ್ರವರ್ಗ-ಎ ಯಲ್ಲಿ ಒಳಮೀಸಲಾತಿ ಪಡೆಯುವ ಅಪಾಯವಿದೆ. ಸಫಾಯಿ ಕರ್ಮಚಾರಿ ಆಯೋಗಕ್ಕೆ ಮೇಲ್ವಿಚಾರಣ ಸಮಿತಿ ಇರುವಂತೆ ಪ.ಜಾತಿ ಪ್ರವರ್ಗ-ಎ ಗೆ ಕೂಡ ಜಾತಿ ಪ್ರಮಾಣ ಪತ್ರ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿ ರಚಿಸಬೇಕು)

ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಇನ್ನು ಮುಂದೆ ಸರ್ಕಾರ ಈ ಜಾತಿಗಳ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ, ಸಲಹೆಗಾರರಾದ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು.

ಕೇಂದ್ರ ಸರಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಶೇ.6:6:5 ಅನ್ವಯಿಸಿ ಆದೇಶಿಸಬೇಕು.

ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.! ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು, ಯು.ಜಿ.ಡಿ. ಕಾರ್ಮಿಕರನ್ನು ಮತ್ತು ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು.

2022-23ರ ಅವದಿಯಲ್ಲಿ ನೇರ ನೇಮಕಗೊಂಡ ರಾಜ್ಯದ 5533 ಪೌರ ಕಾರ್ಮಿಕರ ವೇತನ ಸರ್ಕಾರದಿಂದ ಶೇ. 65ರಷ್ಟು ಮಾತ್ರ ನೀಡುತ್ತಿದ್ದು, ಇತರೆ ಖಾಯಂ ಪೌರ ಕಾರ್ಮಿಕರಿಗೆ ನೀಡುವ ಶೇ. 100 ರಷ್ಟು ಸಂಪೂರ್ಣ ವೇತನ ಸರ್ಕಾರದಿಂದಲೇ ಪಾವತಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...