Homeಕರ್ನಾಟಕಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

- Advertisement -
- Advertisement -

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಊರಾದ ಸಿದ್ದರಾಮನಹುಂಡಿಯಿಂದ ಬೆಳಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ, ‘ಒಳಮೀಸಲಾತಿ ಜಾರಿಗೊಳಿಸಿ, ಇಲ್ಲ ಕುರ್ಚಿ ಖಾಲಿ ಮಾಡಿ’ ಘೋಷಣೆಯೊಂದಿಗೆ ಸಾಗಲಿದೆ. ಬಳಿಕ ಟಿ. ನರಸೀಪುರ, ಬನ್ನೂರು, ವ್ಯಾಸರಾಯನಪುರ ಮೂಲಕ ಮೈಸೂರಿನ ಕಡೆಗೆ ತೆರಳಲಿರುವ ಜಾಥಾ ಡಿಸೆಂಬರ್ 11ರಂದು ಮೈಸೂರಿಗೆ ತಲುಪಿ, ಅಪರಾಹ್ನ 12ಕ್ಕೆ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಪೂರ್ಣಪ್ರಮಾಣದ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳದೆ ಇದ್ದರೆ ಎರಡನೇ ಹಂತದ ಹೋರಾಟವಾಗಿ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಎಸ್. ಮಾರೆಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತಿದ್ದಾರೆ. ಹೀಗಾಗಿ, ಸಂಬಂಧಪಟ್ಟವರನ್ನು ವರ್ಗಾಯಿಸಬೇಕು ಸಾಮಾಜಿಕ ನ್ಯಾಯ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಗೂರು ಸಿದ್ದರಾಜು, ಕನಕನಹಳ್ಳಿ ಕೃಷ್ಣಪ್ಪ, ರಾಜಣ್ಣ ದಂಡೋರ, ಬಸಪ್ಪ ಲಿಡ್ಕರ್, ಸ್ವಾಮಿ ಮೈಸೂರು, ವೆಂಕಟರಾಮು, ಆನಂದಕುಮಾರ್, ಹನುಮೇಶ್ ಗುಂಡೂರು, ಹುಣಸೂರು ಪುಟ್ಟಯ್ಯ ಇದ್ದರು.

ಹಕ್ಕೊತ್ತಾಯಗಳು:

ಶೈಕ್ಷಣಿಕ ಕ್ಷೇತ್ರವಾದ ಉನ್ನತ ಶಿಕ್ಷಣ ಸೇರಿದಂತೆ ಎಲ್ಲಾ ಶೈಕ್ಷಣಿಕ ರಂಗಗಳಲ್ಲಿ ಒಳಮೀಸಲಾತಿಯನ್ನು ಅನ್ವಯಿಸಬೇಕು ಮತ್ತು ಕೂಡಲೇ, ಕಂದಾಯ ಇಲಾಖೆಯು ಪರಿಶಿಷ್ಟ ಜಾತಿಗಳ ಪ್ರವರ್ಗವಾರು ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 15(4) ರಂತೆ ಶೇ.6: 6: 5 ನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿಗಳ ಒಳಮೀಸಲಾತಿಯನ್ನು ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅರೆಸರಕಾರಿ ಹುದ್ದೆಗಳ ನೇರನೇಮಕಾತಿ, ಬಡ್ತಿ, ಬ್ಲಾಕ್‌ಲಾಗ್ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 16(4), 16 (4ಎ)- ಸಂವಿಧಾನ 77ನೇ ತಿದ್ದುಪಡಿ ಕಾಯ್ದೆ 1995 ರಂತೆ ಶೇ.6: 6: 5 ಅನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿ ಉಪ ಹಂಚಿಕೆ ಹಣದಲ್ಲೂ ಒಳಮೀಸಲಾತಿ ಶೇ.6: 6: 5 ಅನುಪಾತದಂತೆ ಆದೇಶ ಮಾಡಿ ಜಾರಿಗೊಳಿಸಬೇಕು. ಉಪಹಂಚಿಕೆ ಕಾಯ್ದೆ ಕಲಂ 7.(ಬಿ), 7 (ಸಿ) ಯನ್ನು ಕೂಡಲೆ ರದ್ದುಪಡಿಸಬೇಕು. (ಸಂವಿಧಾನ ಪರಿಚ್ಛೇದ 16(4) – ಆರ್ಥಿಕ ಸಬಲೀಕರಣಕ್ಕೆ ಸಮಾನ ಅವಕಾಶಗಳು, ಪರಿಶಿಷ್ಟ ಜಾತಿಗಳ ಉಪಯೋಜನೆ ಕಾಯ್ದೆ 2013 ರಂತೆ ಕೆಳ ಮಟ್ಟದ ಆದಾಯ ವರ್ಗವಾದ ಪರಿಶಿಷ್ಟ ಜಾತಿಗಳು ರೂ. 2.50 ಲಕ್ಷ ಆದಾಯ ತಲುಪಲು ಉದ್ದೇಶಿಸಲಾಗಿದ್ದು, ಮಧ್ಯಮ ವರ್ಗದ ಆದಾಯ ರೂ. 5.00 ಲಕ್ಷ ತಲುಪುವ ಗುರಿ ಹೊಂದಿದೆ. ಅದ್ದರಿಂದ ಪರಿಶಿಷ್ಟ ಜಾತಿ ಸಮುದಾಯಗಳು ಕಡಿಮೆ ಆದಾಯ ಹೊಂದಿರುವ ವರ್ಗವಾದ್ದರಿಂದ ಉಪಯೋಜನೆ ಹಣವನ್ನು ಶೇ.6.6:5 ಅನುಪಾತದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಸಮಂಜಸವಾಗಿದೆ)

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. (ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮೂರು (3) ಹಂತದ ಸ್ಥಳೀಯ ಸ್ವಂತ ಸರಕಾರ ರಚನೆ, ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪ.ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸಿದೆ. 1992 ರ ಇಂದಿರಾ ಸಹಾನಿ ತೀರ್ಪಿನಲ್ಲಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಮೀಸಲಾತಿ ನಿಗದಿಪಡಿಸಲಾಗಿತ್ತು. ಆದರೆ, ಪಂಚಾಯತ್ ಕಾಯ್ದೆ 1993 ಹಿಂದುಳಿದವರಿಗೂ ಸ್ಥಳೀಯ ಚುನಾವಣೆಗಳಲ್ಲಿ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಜಾರಿಗೊಳಿಸಿದಂತೆ, ಪ.ಜಾತಿಗಳಿಗೆ ಶೇ.6: 65 ಅನುಪಾತದಂತೆ ಪ್ರವರ್ಗವಾರು ಒಳಮೀಸಲಾತಿ ಜಾರಿಗೊಳಿಸುವುದು ನ್ಯಾಯಯುತ, ಸಮಂಜಸವಾಗಿದೆ)

ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಲು ಪ್ರವರ್ಗ -ಎ ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕು. (ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಬಹುದೆಂದು ಸರಕಾರ ದಿ-25-08-2025 ರಂದು ಆದೇಶಿಸಿದೆ. ಕಡಿಮೆ ಮೆರಿಟ್ ವರ್ಗವಾದ ಪ್ರವರ್ಗ-ಎ ಗೆ, ಮಾದಿಗರಲ್ಲದ ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಬಿ ಸೇರಿದಂತೆ ಯಾರಾದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪ್ರವರ್ಗ-ಎ ಯಲ್ಲಿ ಒಳಮೀಸಲಾತಿ ಪಡೆಯುವ ಅಪಾಯವಿದೆ. ಸಫಾಯಿ ಕರ್ಮಚಾರಿ ಆಯೋಗಕ್ಕೆ ಮೇಲ್ವಿಚಾರಣ ಸಮಿತಿ ಇರುವಂತೆ ಪ.ಜಾತಿ ಪ್ರವರ್ಗ-ಎ ಗೆ ಕೂಡ ಜಾತಿ ಪ್ರಮಾಣ ಪತ್ರ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿ ರಚಿಸಬೇಕು)

ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಇನ್ನು ಮುಂದೆ ಸರ್ಕಾರ ಈ ಜಾತಿಗಳ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ, ಸಲಹೆಗಾರರಾದ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು.

ಕೇಂದ್ರ ಸರಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಶೇ.6:6:5 ಅನ್ವಯಿಸಿ ಆದೇಶಿಸಬೇಕು.

ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.! ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು, ಯು.ಜಿ.ಡಿ. ಕಾರ್ಮಿಕರನ್ನು ಮತ್ತು ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು.

2022-23ರ ಅವದಿಯಲ್ಲಿ ನೇರ ನೇಮಕಗೊಂಡ ರಾಜ್ಯದ 5533 ಪೌರ ಕಾರ್ಮಿಕರ ವೇತನ ಸರ್ಕಾರದಿಂದ ಶೇ. 65ರಷ್ಟು ಮಾತ್ರ ನೀಡುತ್ತಿದ್ದು, ಇತರೆ ಖಾಯಂ ಪೌರ ಕಾರ್ಮಿಕರಿಗೆ ನೀಡುವ ಶೇ. 100 ರಷ್ಟು ಸಂಪೂರ್ಣ ವೇತನ ಸರ್ಕಾರದಿಂದಲೇ ಪಾವತಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...