Homeಕರ್ನಾಟಕಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

- Advertisement -
- Advertisement -

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಊರಾದ ಸಿದ್ದರಾಮನಹುಂಡಿಯಿಂದ ಬೆಳಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ, ‘ಒಳಮೀಸಲಾತಿ ಜಾರಿಗೊಳಿಸಿ, ಇಲ್ಲ ಕುರ್ಚಿ ಖಾಲಿ ಮಾಡಿ’ ಘೋಷಣೆಯೊಂದಿಗೆ ಸಾಗಲಿದೆ. ಬಳಿಕ ಟಿ. ನರಸೀಪುರ, ಬನ್ನೂರು, ವ್ಯಾಸರಾಯನಪುರ ಮೂಲಕ ಮೈಸೂರಿನ ಕಡೆಗೆ ತೆರಳಲಿರುವ ಜಾಥಾ ಡಿಸೆಂಬರ್ 11ರಂದು ಮೈಸೂರಿಗೆ ತಲುಪಿ, ಅಪರಾಹ್ನ 12ಕ್ಕೆ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಪೂರ್ಣಪ್ರಮಾಣದ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳದೆ ಇದ್ದರೆ ಎರಡನೇ ಹಂತದ ಹೋರಾಟವಾಗಿ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಎಸ್. ಮಾರೆಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತಿದ್ದಾರೆ. ಹೀಗಾಗಿ, ಸಂಬಂಧಪಟ್ಟವರನ್ನು ವರ್ಗಾಯಿಸಬೇಕು ಸಾಮಾಜಿಕ ನ್ಯಾಯ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಗೂರು ಸಿದ್ದರಾಜು, ಕನಕನಹಳ್ಳಿ ಕೃಷ್ಣಪ್ಪ, ರಾಜಣ್ಣ ದಂಡೋರ, ಬಸಪ್ಪ ಲಿಡ್ಕರ್, ಸ್ವಾಮಿ ಮೈಸೂರು, ವೆಂಕಟರಾಮು, ಆನಂದಕುಮಾರ್, ಹನುಮೇಶ್ ಗುಂಡೂರು, ಹುಣಸೂರು ಪುಟ್ಟಯ್ಯ ಇದ್ದರು.

ಹಕ್ಕೊತ್ತಾಯಗಳು:

ಶೈಕ್ಷಣಿಕ ಕ್ಷೇತ್ರವಾದ ಉನ್ನತ ಶಿಕ್ಷಣ ಸೇರಿದಂತೆ ಎಲ್ಲಾ ಶೈಕ್ಷಣಿಕ ರಂಗಗಳಲ್ಲಿ ಒಳಮೀಸಲಾತಿಯನ್ನು ಅನ್ವಯಿಸಬೇಕು ಮತ್ತು ಕೂಡಲೇ, ಕಂದಾಯ ಇಲಾಖೆಯು ಪರಿಶಿಷ್ಟ ಜಾತಿಗಳ ಪ್ರವರ್ಗವಾರು ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 15(4) ರಂತೆ ಶೇ.6: 6: 5 ನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿಗಳ ಒಳಮೀಸಲಾತಿಯನ್ನು ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅರೆಸರಕಾರಿ ಹುದ್ದೆಗಳ ನೇರನೇಮಕಾತಿ, ಬಡ್ತಿ, ಬ್ಲಾಕ್‌ಲಾಗ್ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 16(4), 16 (4ಎ)- ಸಂವಿಧಾನ 77ನೇ ತಿದ್ದುಪಡಿ ಕಾಯ್ದೆ 1995 ರಂತೆ ಶೇ.6: 6: 5 ಅನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿ ಉಪ ಹಂಚಿಕೆ ಹಣದಲ್ಲೂ ಒಳಮೀಸಲಾತಿ ಶೇ.6: 6: 5 ಅನುಪಾತದಂತೆ ಆದೇಶ ಮಾಡಿ ಜಾರಿಗೊಳಿಸಬೇಕು. ಉಪಹಂಚಿಕೆ ಕಾಯ್ದೆ ಕಲಂ 7.(ಬಿ), 7 (ಸಿ) ಯನ್ನು ಕೂಡಲೆ ರದ್ದುಪಡಿಸಬೇಕು. (ಸಂವಿಧಾನ ಪರಿಚ್ಛೇದ 16(4) – ಆರ್ಥಿಕ ಸಬಲೀಕರಣಕ್ಕೆ ಸಮಾನ ಅವಕಾಶಗಳು, ಪರಿಶಿಷ್ಟ ಜಾತಿಗಳ ಉಪಯೋಜನೆ ಕಾಯ್ದೆ 2013 ರಂತೆ ಕೆಳ ಮಟ್ಟದ ಆದಾಯ ವರ್ಗವಾದ ಪರಿಶಿಷ್ಟ ಜಾತಿಗಳು ರೂ. 2.50 ಲಕ್ಷ ಆದಾಯ ತಲುಪಲು ಉದ್ದೇಶಿಸಲಾಗಿದ್ದು, ಮಧ್ಯಮ ವರ್ಗದ ಆದಾಯ ರೂ. 5.00 ಲಕ್ಷ ತಲುಪುವ ಗುರಿ ಹೊಂದಿದೆ. ಅದ್ದರಿಂದ ಪರಿಶಿಷ್ಟ ಜಾತಿ ಸಮುದಾಯಗಳು ಕಡಿಮೆ ಆದಾಯ ಹೊಂದಿರುವ ವರ್ಗವಾದ್ದರಿಂದ ಉಪಯೋಜನೆ ಹಣವನ್ನು ಶೇ.6.6:5 ಅನುಪಾತದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಸಮಂಜಸವಾಗಿದೆ)

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. (ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮೂರು (3) ಹಂತದ ಸ್ಥಳೀಯ ಸ್ವಂತ ಸರಕಾರ ರಚನೆ, ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪ.ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸಿದೆ. 1992 ರ ಇಂದಿರಾ ಸಹಾನಿ ತೀರ್ಪಿನಲ್ಲಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಮೀಸಲಾತಿ ನಿಗದಿಪಡಿಸಲಾಗಿತ್ತು. ಆದರೆ, ಪಂಚಾಯತ್ ಕಾಯ್ದೆ 1993 ಹಿಂದುಳಿದವರಿಗೂ ಸ್ಥಳೀಯ ಚುನಾವಣೆಗಳಲ್ಲಿ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಜಾರಿಗೊಳಿಸಿದಂತೆ, ಪ.ಜಾತಿಗಳಿಗೆ ಶೇ.6: 65 ಅನುಪಾತದಂತೆ ಪ್ರವರ್ಗವಾರು ಒಳಮೀಸಲಾತಿ ಜಾರಿಗೊಳಿಸುವುದು ನ್ಯಾಯಯುತ, ಸಮಂಜಸವಾಗಿದೆ)

ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಲು ಪ್ರವರ್ಗ -ಎ ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕು. (ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಬಹುದೆಂದು ಸರಕಾರ ದಿ-25-08-2025 ರಂದು ಆದೇಶಿಸಿದೆ. ಕಡಿಮೆ ಮೆರಿಟ್ ವರ್ಗವಾದ ಪ್ರವರ್ಗ-ಎ ಗೆ, ಮಾದಿಗರಲ್ಲದ ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಬಿ ಸೇರಿದಂತೆ ಯಾರಾದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪ್ರವರ್ಗ-ಎ ಯಲ್ಲಿ ಒಳಮೀಸಲಾತಿ ಪಡೆಯುವ ಅಪಾಯವಿದೆ. ಸಫಾಯಿ ಕರ್ಮಚಾರಿ ಆಯೋಗಕ್ಕೆ ಮೇಲ್ವಿಚಾರಣ ಸಮಿತಿ ಇರುವಂತೆ ಪ.ಜಾತಿ ಪ್ರವರ್ಗ-ಎ ಗೆ ಕೂಡ ಜಾತಿ ಪ್ರಮಾಣ ಪತ್ರ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿ ರಚಿಸಬೇಕು)

ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಇನ್ನು ಮುಂದೆ ಸರ್ಕಾರ ಈ ಜಾತಿಗಳ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ, ಸಲಹೆಗಾರರಾದ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು.

ಕೇಂದ್ರ ಸರಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಶೇ.6:6:5 ಅನ್ವಯಿಸಿ ಆದೇಶಿಸಬೇಕು.

ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.! ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು, ಯು.ಜಿ.ಡಿ. ಕಾರ್ಮಿಕರನ್ನು ಮತ್ತು ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು.

2022-23ರ ಅವದಿಯಲ್ಲಿ ನೇರ ನೇಮಕಗೊಂಡ ರಾಜ್ಯದ 5533 ಪೌರ ಕಾರ್ಮಿಕರ ವೇತನ ಸರ್ಕಾರದಿಂದ ಶೇ. 65ರಷ್ಟು ಮಾತ್ರ ನೀಡುತ್ತಿದ್ದು, ಇತರೆ ಖಾಯಂ ಪೌರ ಕಾರ್ಮಿಕರಿಗೆ ನೀಡುವ ಶೇ. 100 ರಷ್ಟು ಸಂಪೂರ್ಣ ವೇತನ ಸರ್ಕಾರದಿಂದಲೇ ಪಾವತಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...