Homeಸಿನಿಮಾಕ್ರೀಡೆಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ಇನ್ನಿಲ್ಲ

ಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ಇನ್ನಿಲ್ಲ

- Advertisement -
- Advertisement -

ಫುಟ್‌ಬಾಲ್‌ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರನೆಂಬ ಖ್ಯಾತಿಗೆ ಒಳಗಾಗಿದ್ದ ಬ್ರೆಜಿಲ್ ದೇಶದ ಪೀಲೆ (82) ಕೊನೆಯುಸಿರೆಳೆದಿದ್ದಾರೆ.

ಮೂರು ಬಾರಿ ಫಿಫಾ ವಿಶ್ವಕಪ್‌ ವಿಜೇತ ತಂಡದಲ್ಲಿದ್ದ ಏಕೈಕ ಆಟಗಾರರಾಗಿದ್ದ ಪೀಲೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಬಾರಿಯ ಫಿಫಾ ವಿಶ್ವಕಪ್ ಅನ್ನು ಅವರು ಆಸ್ಪತ್ರೆಯಲ್ಲಿಯೇ ನೋಡಬೇಕಾಗಿತ್ತು. ಅವರು ಗುರುವಾರ ಮಧ್ಯರಾತ್ರಿ ಸಾವ್‌ಪೌಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಎಡ್ಸನ್‌ ಅರಾಂಟೆಸ್‌ ಡು ನಸಿಮೆಂಟೊ ನಿಜನಾಮದ ಪೀಲೆ 1,366 ಪಂದ್ಯಗಳಲ್ಲಿ 1,281 ಗೋಲು ಗಳಿಸಿ ದಾಖಲೆ ಮಾಡಿದ್ದಾರೆ. ಫಿಫಾ ಶತಮಾನದ ಆಟಗಾರ ಪ್ರಶಸ್ತಿ ಪುರಸ್ಕೃತರಾಗಿದ್ದ ಪೀಲೆ, ಟೈಮ್ಸ್‌ನ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದರು.

ಪ್ರಪಂಚದೆಲ್ಲಡೆ ಸಂತಾಪ

ಫುಟ್‌ಬಾಲ್ ಜಗತ್ತಿನ ದಂತಕಥೆ ಪೀಲೆ ನಿಧನಕ್ಕೆ ಪ್ರಪಂಚದಾದ್ಯಂತ ಸಂತಾಪ ಸೂಚಿಸಲಾಗಿದೆ. ಫ್ರಾನ್ಸ್‌ನ ಉದಯೋನ್ಮುಖ ಆಟಗಾರ ಕಿಲಿಯನ್ ಎಂಬಾಪೆ, “ಫುಟ್ಬಾಲ್ ರಾಜ ನಮ್ಮನ್ನು ಅಗಲಿದ್ದಾರೆ. ಆದರೆ ಅವರ ಪರಂಪರೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಬ್ರೆಜಿಲ್‌ನ ಇತ್ತೀಚಿನ ಪೀಳಿಗೆಗೆ ಸಿಗಲಾರದ ಅವಕಾಶ ನನಗೆ ಸಿಕ್ಕಿತ್ತು. ನಾನು ಪಕೆಂಬು ಮತ್ತು ಮೊರುಂಬಿಯಲ್ಲಿ ಪೀಲೆ ಆಡುವುದನ್ನು ನಾನು ನೇರವಾಗಿ ನೋಡಿದ್ದೇನೆ. ಚೆಂಡು ಪೀಲೆಗೆ ಸಿಕ್ಕಿತ್ತೆಂದರೆ ಅವರು ವಿಶೇಷವಾದುದ್ದನ್ನು ಮಾಡುತ್ತಿದ್ದರು. ಹಲವು ಬಾರಿ ಅದು ಗೋಲ್‌ನೊಂದಿಗೆ ಕೊನೆಗೊಳ್ಳುತ್ತಿತ್ತು” ಎಂದು ಬ್ರೆಜಿಲ್ ಅಧ್ಯಕ್ಷ ಲುಲಾ ನೆನಪಿಸಿಕೊಂಡಿದ್ದಾರೆ.

ಪೀಲೆ ಸುಂದರ ಆಟವಾಡಿದ ಶ್ರೇಷ್ಠರಲ್ಲಿ ಒಬ್ಬರು. ವಿಶ್ವದ ಪ್ರಮುಖ ಕ್ರೀಡಾಪಟುಗಳಲ್ಲಿ ಒಬ್ಬರಾಗಿ, ಜನರನ್ನು ಒಟ್ಟುಗೂಡಿಸುವ ಕ್ರೀಡೆಯ ಶಕ್ತಿಯನ್ನು ಅವರು ಅರ್ಥಮಾಡಿಕೊಂಡರು. ಅವರ ಕುಟುಂಬ ಮತ್ತು ಅವರನ್ನು ಪ್ರೀತಿಸುವ ಮತ್ತು ಮೆಚ್ಚಿದ ಪ್ರತಿಯೊಬ್ಬರಿಗೂ ನನ್ನ ಸಂತಾಪಗಳು ಎಂದು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಟ್ವೀಟ್ ಮಾಡಿದ್ದಾರೆ.

ಪೀಲೆ ಕೇವಲ ಫುಟ್‌ಬಾಲ್‌ನ ರಾಜನಲ್ಲ, ಆದರೆ ನಿರ್ವಿವಾದವಾಗಿ 20ನೇ ಶತಮಾನದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದರು. ಕಪ್ಪು ಮುತ್ತು ಎಂದು ಖ್ಯಾತರಾಗಿದ್ದ ಅವರು ಯಾವಾಗಲೂ ಎಲ್ಲಾ ಅರ್ಥದಲ್ಲಿ ಫುಟ್‌ಬಾಲ್‌ನ ಐಕಾನ್ ಆಗಿ ಉಳಿಯುತ್ತದೆ. ಅವರು ಮರೆಯಲಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...