Homeಕರ್ನಾಟಕಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

ಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

- Advertisement -
- Advertisement -

ವಿಕೇಂದ್ರಿಕೃತವಾಗಿ ಜನ ಸಹಭಾಗಿತ್ವದಲ್ಲಿ ಸಮಗ್ರ ಜಲಸಂರಕ್ಷಣೆ ಮತ್ತು ಜನ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಬರಮುಕ್ತಗೊಳಿಸುವ ಮಹತ್ವದ ಆಶಯದೊಂದಿಗೆ ಮೇ 17, 18, 19 ರಂದು ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಹೊರವಲಯದಲ್ಲಿರುವ ‘ಸಮತಾ ವಿದ್ಯಾಲಯದಲ್ಲಿ’ ಸಮಾವೇಶ ನಡೆಯಲಿದ್ದು ತರುಣ್ ಭಾರತ್ ಸಂಘ್‍ನ ಮುಖಂಡರೂ, ಪ್ರಖ್ಯಾತ ಜಲತಜ್ಞರು ಆದ ಡಾ.ರಾಜೇಂದ್ರ ಸಿಂಗ್‍ರವರು ತರಬೇತಿ ನಡೆಸಿಕೊಡಲಿದ್ದಾರೆ.

ಈ ಸಮಾವೇಶದಲ್ಲಿ ತರಬೇತಿಗೊಂಡ ಕಾರ್ಯಕರ್ತರು ಸ್ಥಳೀಯವಾಗಿ ತಮ್ಮ ಶಕ್ತಿ ಸಾಮಥ್ರ್ಯ, ಸಂಪನ್ಮೂಲ ಮತ್ತು ಜನಸಹಕಾರದೊಂದಿಗೆ ಜನಸಂರಕ್ಷಣೆ ಮತ್ತು ಜನ ನಿರ್ವಹಣೆಯ ವಿನೂತನ, ವಿಶಿಷ್ಟ ಮಾದರಿಗಳನ್ನು ರೂಪಿಸುವ ಪ್ರಯತ್ನದಲ್ಲಿ ತೊಡಗುವಂತಾಗಬೇಕೆಂಬುದು ಈ ಸಮಾವೇಶದ ಉದ್ದೇಶವಾಗಿದೆ.
ಈ ಹಿಂದೆ ಡಾ.ರಾಜೇಂದ್ರ ಸಿಂಗ್‍ರವರ ತರುಣ್ ಭಾರತ್ ಸಂಘ ಮತ್ತು ರಾಷ್ಟ್ರೀಯ ಜಲ್ ಬಿರಾದಾರಿ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳು, ಜಲತಜ್ಞರು, ಸಮುದಾಯ ಸಂಘಟನೆಗಳ ಮುಖಂಡರುಗಳು, ಜಲಕಾರ್ಯಕರ್ತರು ಸೇರಿಕೊಂಡು 2017ರಲ್ಲಿ ರಾಷ್ಟ್ರವ್ಯಾಪಿ 2 ಜಲಸಾಕ್ಷರತಾ ಯಾತ್ರೆಗಳನ್ನು ಕೈಗೊಂಡು ದೇಶಾದ್ಯಂತ ಜಲಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿತ್ತು.
ಅದೇ ರೀತಿ 2017ರ ಆಗಸ್ಟ್ ನಲ್ಲಿ ಕರ್ನಾಟಕದ ವಿಜಯಪುರದಲ್ಲಿ ಮೂರು ದಿನಗಳ ಕಾಲ ‘ಬರಮುಕ್ತ ಭಾರತ ನಿರ್ಮಾಣಕ್ಕಾಗಿ ರಾಷ್ಟ್ರೀಯ ಜಲಸಮಾವೇಶ’ವೊಂದನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಲ್ಲಿ ವಿಜಯಪುರ ಘೋಷಣೆಯನ್ನು ಸಹ ಹೊರತರಲಾಗಿತ್ತು. ಇಂದು ಬರ ನಿರ್ವಹಣೆ ಮತ್ತು ಜಲಸಾಕ್ಷರತೆಯ ಕುರಿತು ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಅವುಗಳನ್ನು ಹೆಚ್ಚು ಸಂಘಟಿತವಾಗಿ, ವ್ಯಾಪಕವಾಗಿ ಮತ್ತು ಪರಿಣಾಮಕಾರಿಯಾಗಿ ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಈ ವರ್ಷ ತರಬೇತಿ ಸಮಾವೇಶ ನಡೆಯಲಿದೆ.
ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮಕುಮಾರ್ ಹಾಗೂ ವಿಜ್ಞಾನ ಚಳವಳಿ ಮತ್ತು ಪರಿಸರ ಹೋರಾಟಗಾರರಾದ ಸಿ.ಯತಿರಾಜುರವರು ಈ ತರಬೇತಿ ಸಮಾವೇಶದ ಸಂಘಟನೆಯ ನೇತೃತ್ವವನ್ನು ವಹಿಸಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವರ್ಷಗಳಿಂದ ಜಲಜಾಗೃತಿ, ಜಲಸಂರಕ್ಷಣೆ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಈ ದಿಸೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸಂಘಟನೆಗಳನ್ನು, ಕಾರ್ಯಕರ್ತರನ್ನು, ಆಡಳಿತಗಾರರನ್ನು, ಜಲತಜ್ಞರನ್ನು ಮುಂತಾದವರನ್ನು ಈ ಜಲ ಜನಾಂದೋಲನ ರೂಪಿಸಲು ಆಹ್ವಾನಿಸಿದ್ದಾರೆ.
ವೈಯಕ್ತಿಕವಾಗಿಯಾಗಲಿ, ಅಥವಾ ಸಂಘಟನೆ ಗುಂಪುಗಳ ಪರವಾಗಿಯಾಗಲಿ ಭಾಗವಹಿಸುವ ಆಸಕ್ತಿವುಳ್ಳವರು ಮೇ 10ರೊಳಗೆ ದೂರವಾಣಿ ಕರೆ, ಮೇಲ್ ಮೂಲಕ ಖಚಿತಪಡಿಸಲು ಕೋರಿದೆ. 9481677607 / 9741889987 ಹಾಗೂ [email protected] ಮೂಲಕ ಸಂಪರ್ಕಿಸಬಹುದಾಗಿದೆ.
ನೀರಿಗಾಗಿ ಹಾಹಕಾರ ಮತ್ತು ಹವಾಮಾನ ವೈಪರಿತ್ಯಗಳು ಪ್ರತಿದಿನದ ವಿದ್ಯಮಾನಗಳಾಗಿರುವ ಈ ಕಾಲದಲ್ಲಿ ಇಂತಹ ಮಹತ್ವದ ಹೋರಾಟವನ್ನು naanugauri.com ಪತ್ರಿಕೆಯು ಬೆಂಬಲಿಸಿ ಅದರ ಭಾಗವಾಗುತ್ತಿದೆ. ಜಲಸಂರಕ್ಷಣೆಯ ವಿಚಾರದ ಕುರಿತ ಮಹತ್ವದ ಲೇಖನಗಳು, ಜಾಗೃತಿ ಬರಹಗಳು, ಯಶಸ್ವಿ ಪ್ರಯೋಗಗಳು ಇತ್ಯಾದಿಗಳ ಕುರಿತ ಬರಹ, ಪೋಸ್ಟರ್ ಅಥವಾ ವಿಡಿಯೋಗಳನ್ನು ನೀವು ನಮಗೆ ಕಳಿಸಬಹುದು. ಅವುಗಳನ್ನು ಪ್ರಕಟಿಸಿ ಹೆಚ್ಚು ಜನರಿಗೆ ತಲುಪಲು ನಾವು ನೆರವಾಗುತ್ತೇವೆ. 7353770202 ವಾಟ್ಸಾಪ್ ನಂಬರ್ ಅಥವಾ [email protected] ಗೆ ಕಳಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...