Homeಕರ್ನಾಟಕಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

ಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

- Advertisement -
- Advertisement -

ವಿಕೇಂದ್ರಿಕೃತವಾಗಿ ಜನ ಸಹಭಾಗಿತ್ವದಲ್ಲಿ ಸಮಗ್ರ ಜಲಸಂರಕ್ಷಣೆ ಮತ್ತು ಜನ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಬರಮುಕ್ತಗೊಳಿಸುವ ಮಹತ್ವದ ಆಶಯದೊಂದಿಗೆ ಮೇ 17, 18, 19 ರಂದು ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಹೊರವಲಯದಲ್ಲಿರುವ ‘ಸಮತಾ ವಿದ್ಯಾಲಯದಲ್ಲಿ’ ಸಮಾವೇಶ ನಡೆಯಲಿದ್ದು ತರುಣ್ ಭಾರತ್ ಸಂಘ್‍ನ ಮುಖಂಡರೂ, ಪ್ರಖ್ಯಾತ ಜಲತಜ್ಞರು ಆದ ಡಾ.ರಾಜೇಂದ್ರ ಸಿಂಗ್‍ರವರು ತರಬೇತಿ ನಡೆಸಿಕೊಡಲಿದ್ದಾರೆ.

ಈ ಸಮಾವೇಶದಲ್ಲಿ ತರಬೇತಿಗೊಂಡ ಕಾರ್ಯಕರ್ತರು ಸ್ಥಳೀಯವಾಗಿ ತಮ್ಮ ಶಕ್ತಿ ಸಾಮಥ್ರ್ಯ, ಸಂಪನ್ಮೂಲ ಮತ್ತು ಜನಸಹಕಾರದೊಂದಿಗೆ ಜನಸಂರಕ್ಷಣೆ ಮತ್ತು ಜನ ನಿರ್ವಹಣೆಯ ವಿನೂತನ, ವಿಶಿಷ್ಟ ಮಾದರಿಗಳನ್ನು ರೂಪಿಸುವ ಪ್ರಯತ್ನದಲ್ಲಿ ತೊಡಗುವಂತಾಗಬೇಕೆಂಬುದು ಈ ಸಮಾವೇಶದ ಉದ್ದೇಶವಾಗಿದೆ.
ಈ ಹಿಂದೆ ಡಾ.ರಾಜೇಂದ್ರ ಸಿಂಗ್‍ರವರ ತರುಣ್ ಭಾರತ್ ಸಂಘ ಮತ್ತು ರಾಷ್ಟ್ರೀಯ ಜಲ್ ಬಿರಾದಾರಿ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳು, ಜಲತಜ್ಞರು, ಸಮುದಾಯ ಸಂಘಟನೆಗಳ ಮುಖಂಡರುಗಳು, ಜಲಕಾರ್ಯಕರ್ತರು ಸೇರಿಕೊಂಡು 2017ರಲ್ಲಿ ರಾಷ್ಟ್ರವ್ಯಾಪಿ 2 ಜಲಸಾಕ್ಷರತಾ ಯಾತ್ರೆಗಳನ್ನು ಕೈಗೊಂಡು ದೇಶಾದ್ಯಂತ ಜಲಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿತ್ತು.
ಅದೇ ರೀತಿ 2017ರ ಆಗಸ್ಟ್ ನಲ್ಲಿ ಕರ್ನಾಟಕದ ವಿಜಯಪುರದಲ್ಲಿ ಮೂರು ದಿನಗಳ ಕಾಲ ‘ಬರಮುಕ್ತ ಭಾರತ ನಿರ್ಮಾಣಕ್ಕಾಗಿ ರಾಷ್ಟ್ರೀಯ ಜಲಸಮಾವೇಶ’ವೊಂದನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಲ್ಲಿ ವಿಜಯಪುರ ಘೋಷಣೆಯನ್ನು ಸಹ ಹೊರತರಲಾಗಿತ್ತು. ಇಂದು ಬರ ನಿರ್ವಹಣೆ ಮತ್ತು ಜಲಸಾಕ್ಷರತೆಯ ಕುರಿತು ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಅವುಗಳನ್ನು ಹೆಚ್ಚು ಸಂಘಟಿತವಾಗಿ, ವ್ಯಾಪಕವಾಗಿ ಮತ್ತು ಪರಿಣಾಮಕಾರಿಯಾಗಿ ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಈ ವರ್ಷ ತರಬೇತಿ ಸಮಾವೇಶ ನಡೆಯಲಿದೆ.
ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮಕುಮಾರ್ ಹಾಗೂ ವಿಜ್ಞಾನ ಚಳವಳಿ ಮತ್ತು ಪರಿಸರ ಹೋರಾಟಗಾರರಾದ ಸಿ.ಯತಿರಾಜುರವರು ಈ ತರಬೇತಿ ಸಮಾವೇಶದ ಸಂಘಟನೆಯ ನೇತೃತ್ವವನ್ನು ವಹಿಸಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವರ್ಷಗಳಿಂದ ಜಲಜಾಗೃತಿ, ಜಲಸಂರಕ್ಷಣೆ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಈ ದಿಸೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸಂಘಟನೆಗಳನ್ನು, ಕಾರ್ಯಕರ್ತರನ್ನು, ಆಡಳಿತಗಾರರನ್ನು, ಜಲತಜ್ಞರನ್ನು ಮುಂತಾದವರನ್ನು ಈ ಜಲ ಜನಾಂದೋಲನ ರೂಪಿಸಲು ಆಹ್ವಾನಿಸಿದ್ದಾರೆ.
ವೈಯಕ್ತಿಕವಾಗಿಯಾಗಲಿ, ಅಥವಾ ಸಂಘಟನೆ ಗುಂಪುಗಳ ಪರವಾಗಿಯಾಗಲಿ ಭಾಗವಹಿಸುವ ಆಸಕ್ತಿವುಳ್ಳವರು ಮೇ 10ರೊಳಗೆ ದೂರವಾಣಿ ಕರೆ, ಮೇಲ್ ಮೂಲಕ ಖಚಿತಪಡಿಸಲು ಕೋರಿದೆ. 9481677607 / 9741889987 ಹಾಗೂ [email protected] ಮೂಲಕ ಸಂಪರ್ಕಿಸಬಹುದಾಗಿದೆ.
ನೀರಿಗಾಗಿ ಹಾಹಕಾರ ಮತ್ತು ಹವಾಮಾನ ವೈಪರಿತ್ಯಗಳು ಪ್ರತಿದಿನದ ವಿದ್ಯಮಾನಗಳಾಗಿರುವ ಈ ಕಾಲದಲ್ಲಿ ಇಂತಹ ಮಹತ್ವದ ಹೋರಾಟವನ್ನು naanugauri.com ಪತ್ರಿಕೆಯು ಬೆಂಬಲಿಸಿ ಅದರ ಭಾಗವಾಗುತ್ತಿದೆ. ಜಲಸಂರಕ್ಷಣೆಯ ವಿಚಾರದ ಕುರಿತ ಮಹತ್ವದ ಲೇಖನಗಳು, ಜಾಗೃತಿ ಬರಹಗಳು, ಯಶಸ್ವಿ ಪ್ರಯೋಗಗಳು ಇತ್ಯಾದಿಗಳ ಕುರಿತ ಬರಹ, ಪೋಸ್ಟರ್ ಅಥವಾ ವಿಡಿಯೋಗಳನ್ನು ನೀವು ನಮಗೆ ಕಳಿಸಬಹುದು. ಅವುಗಳನ್ನು ಪ್ರಕಟಿಸಿ ಹೆಚ್ಚು ಜನರಿಗೆ ತಲುಪಲು ನಾವು ನೆರವಾಗುತ್ತೇವೆ. 7353770202 ವಾಟ್ಸಾಪ್ ನಂಬರ್ ಅಥವಾ [email protected] ಗೆ ಕಳಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...