Homeಮುಖಪುಟ"ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ" : ಕೇಜ್ರಿವಾಲ್...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ (ಏ.13) ಕಾಯ್ದಿರಿಸಿದೆ.

ಸೋಮವಾರ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠದ ಮುಂದೆ ಖುದ್ದು ಹಾಜರಾದ ಕೇಜ್ರಿವಾಲ್, ನ್ಯಾಯಮೂರ್ತಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಅಧಿವಕ್ತ ಪರಿಷತ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ತಾರತಮ್ಯದ ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನ್ಯಾಯಮೂರ್ತಿಗಳ ನಡೆಯನ್ನು ಸಮರ್ಥಿಸಿಕೊಂಡರು. ಆ ಕಾರ್ಯಕ್ರಮವನ್ನು “ಬಾರ್ ಅಸೋಸಿಯೇಷನ್” ಆಯೋಜಿಸಿತ್ತು ಮತ್ತು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳ ಹಾಲಿ ನ್ಯಾಯಮೂರ್ತಿಗಳೂ ಅದರಲ್ಲಿ ಪಾಲ್ಗೊಂಡಿದ್ದರು, ಆದ್ದರಿಂದ ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ವಾದಿಸಿದ್ದಾರೆ.

ವಿಚಾರಣಾ ನ್ಯಾಯಾಲಯ ಮೂರು ತಿಂಗಳ ಸುದೀರ್ಘ ವಿಚಾರಣೆಯ ನಂತರ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ಕೇವಲ ಐದು ನಿಮಿಷಗಳ ವಿಚಾರಣೆಯಲ್ಲಿ ತಪ್ಪೆಂದು ಘೋಷಿಸಿದೆ. ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ ಎಂದು ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಹೇಳಿದ್ದಾರೆ ಮತ್ತು ನ್ಯಾಯಾಲಯ ಪಕ್ಷಪಾತ ಮಾಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. “ನನಗೆ ಇಲ್ಲಿ ನ್ಯಾಯ ಸಿಗುತ್ತದೆಯೇ ಎಂಬ ಬಗ್ಗೆ ಗಂಭೀರ ಅನುಮಾನಗಳು ಮತ್ತು ಆತಂಕಗಳು ಶುರುವಾಗಿವೆ” ಎಂದಿದ್ದಾರೆ. ಅಷ್ಟೇ ಅಲ್ಲದೆ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳು ಸೇರಿದಂತೆ ಐದು ವಿಷಯಗಳಲ್ಲಿ ನ್ಯಾಯಮೂರ್ತಿಗಳು ನೀಡಿದ ಆದೇಶಗಳು ಬಹುತೇಕ ಅಂತಿಮ ತೀರ್ಪು ನೀಡಿದಂತೆಯೇ ಇವೆ ಎಂದು ಕೇಜ್ರಿವಾಲ್ ಪರ ವಕೀಲರು ವಾದ ಮಂಡಿಸಿದ್ದಾರೆ.

ಕಳೆದ ವಿಚಾರಣೆಯ ಸಮಯದಲ್ಲಿ, ಕೇಜ್ರಿವಾಲ್ ಅವರು ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ (recusal) ಅರ್ಜಿಯ ಬಗ್ಗೆ ವೈಯಕ್ತಿಕವಾಗಿ ವಾದ ಮಂಡಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಜ್ರಿವಾಲ್ ವೈಯಕ್ತಿಕವಾಗಿ ವಾದ ಮಂಡಿಸಲು ಬಯಸಿದರೆ ಮೊದಲು ತಮ್ಮ ಪರ ವಕೀಲರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದರು. ಈ ನ್ಯಾಯಾಲಯ ನಿಮ್ಮ ಅತಿರಂಜಿತ ನಾಟಕೀಯ ಪ್ರದರ್ಶನಗಳಿಗೆ ವೇದಿಕೆಯಲ್ಲ ಎಂದು ಮಾರ್ಮಿಕವಾಗಿ ಟೀಕಿಸಿದ್ದರು.

ಕಳೆದ ವಿಚಾರಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಐವರು ಆರೋಪಿಗಳು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರಮುಖ ಕಾರಣವಾಗಿ ಅವರು ‘ಅಖಿಲ ಭಾರತೀಯ ಅಧಿವಕ್ತ ಪರಿಷತ್’ (ಎಬಿಎಪಿ) ನೊಂದಿಗೆ ನ್ಯಾಯಮೂರ್ತಿಗಳು ಹೊಂದಿದ್ದಾರೆನ್ನಲಾದ ಸೌಹಾರ್ದಯುತ ಸಂಬಂಧ ಮತ್ತು ವೈಚಾರಿಕ ಒಡನಾಟವನ್ನು ಉಲ್ಲೇಖಿಸಿದ್ದರು. ವಕೀಲರ ಸಂಘಟನೆಯಾದ ಎಬಿಎಪಿ, ಆರ್‌ಎಸ್‌ಎಸ್‌ನ ಒಂದು ಅಂಗಸಂಸ್ಥೆ ಎಂದು ಪರಿಗಣಿಸಲ್ಪಟ್ಟಿದೆ. ನ್ಯಾಯಮೂರ್ತಿಗಳು ಈ ಸಂಘಟನೆಯ ಕಾರ್ಯಕ್ರಮಗಳಲ್ಲಿ ಈ ಹಿಂದೆ ಭಾಗವಹಿಸಿರುವುದು ತಮಗೆ ನ್ಯಾಯ ಸಿಗುವ ಬಗ್ಗೆ ‘ಪಕ್ಷಪಾತದ ಆತಂಕ’ ಮೂಡಿಸಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಕೇಜ್ರಿವಾಲ್ ವಾದ ಆಲಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, “ನ್ಯಾಯಾಧೀಶರು ಪ್ರಕರಣದಿಂದ ಹಿಂದೆ ಸರಿಯುವ (Recusal) ಕಾನೂನಿನ ಬಗ್ಗೆ ನಾನು ಸಾಕಷ್ಟು ತಿಳಿದುಕೊಂಡೆ. ನನ್ನ ಜೀವನದಲ್ಲೇ ಮೊದಲ ಬಾರಿಗೆ ಯಾರೋ ಒಬ್ಬರು ನನ್ನನ್ನು ಈ ಕೇಸ್‌ನಿಂದ ಹಿಂದೆ ಸರಿಯಲು ಕೇಳಿಕೊಂಡಿದ್ದಾರೆ. ಇದರಿಂದ ನನಗೆ ಹೊಸ ವಿಷಯಗಳು ತಿಳಿಯಲು ಸಾಧ್ಯವಾಯಿತು. ಈ ಪ್ರಕರಣದಲ್ಲಿ ನಾನು ಒಂದು ಉತ್ತಮ ತೀರ್ಪು ನೀಡುತ್ತೇನೆ ಎಂಬ ಭರವಸೆ ನನಗಿದೆ” ಎಂದು ಹೇಳಿದ್ದಾರೆ. ಆದೇಶ ಕಾಯ್ದಿರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸಿಬಿಐ ಏಪ್ರಿಲ್ 7ರಂದು ಸಲ್ಲಿಸಿದ ತನ್ನ ಅಫಿಡವಿಟ್‌ನಲ್ಲಿ ಕೇಜ್ರಿವಾಲ್ ಅವರ ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ ಕೋರಿಕೆಯನ್ನು ಬಲವಾಗಿ ವಿರೋಧಿಸಿದೆ. “ಕಾನೂನು ವಿಚಾರಗೋಷ್ಠಿಯ ವಿಷಯವು ರಾಜಕೀಯವಾಗಿಲ್ಲದಿದ್ದಾಗ, ಅದರಲ್ಲಿ ಭಾಗವಹಿಸುವುದು ವಿಚಾರಣೆಯಿಂದ ಹಿಂದೆ ಸರಿಯಲು ಎಂದಿಗೂ ಕಾರಣವಾಗಲಾರದು. ಆದ್ದರಿಂದ ಇದು ಯಾವುದೇ ಸದ್ಧಾಂತಿಕ ಸಂಬಂಧವನ್ನು ಪ್ರದರ್ಶಿಸುವುದಿಲ್ಲ” ಎಂದು ಸಿಬಿಐ ಹೇಳಿದೆ. ನ್ಯಾಯಮೂರ್ತಿಗಳ ಮೇಲೆ ಪಕ್ಷಪಾತದ ಆರೋಪ ಹೊರಿಸಲು ಇಂತಹ ನಿರ್ಲಜ್ಜ ಮತ್ತು ವ್ಯಾಪಕವಾದ ಆಕ್ಷೇಪಗಳನ್ನು ಮಾಡುವುದು ನ್ಯಾಯಾಲಯದ ನಿಂದನೆಯಾಗುತ್ತದೆ ಎಂದು ಸಿಬಿಐ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...