Homeಮುಖಪುಟ"ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ" : ಕೇಜ್ರಿವಾಲ್...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ (ಏ.13) ಕಾಯ್ದಿರಿಸಿದೆ.

ಸೋಮವಾರ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠದ ಮುಂದೆ ಖುದ್ದು ಹಾಜರಾದ ಕೇಜ್ರಿವಾಲ್, ನ್ಯಾಯಮೂರ್ತಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಅಧಿವಕ್ತ ಪರಿಷತ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ತಾರತಮ್ಯದ ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನ್ಯಾಯಮೂರ್ತಿಗಳ ನಡೆಯನ್ನು ಸಮರ್ಥಿಸಿಕೊಂಡರು. ಆ ಕಾರ್ಯಕ್ರಮವನ್ನು “ಬಾರ್ ಅಸೋಸಿಯೇಷನ್” ಆಯೋಜಿಸಿತ್ತು ಮತ್ತು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳ ಹಾಲಿ ನ್ಯಾಯಮೂರ್ತಿಗಳೂ ಅದರಲ್ಲಿ ಪಾಲ್ಗೊಂಡಿದ್ದರು, ಆದ್ದರಿಂದ ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ವಾದಿಸಿದ್ದಾರೆ.

ವಿಚಾರಣಾ ನ್ಯಾಯಾಲಯ ಮೂರು ತಿಂಗಳ ಸುದೀರ್ಘ ವಿಚಾರಣೆಯ ನಂತರ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ಕೇವಲ ಐದು ನಿಮಿಷಗಳ ವಿಚಾರಣೆಯಲ್ಲಿ ತಪ್ಪೆಂದು ಘೋಷಿಸಿದೆ. ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ ಎಂದು ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಹೇಳಿದ್ದಾರೆ ಮತ್ತು ನ್ಯಾಯಾಲಯ ಪಕ್ಷಪಾತ ಮಾಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. “ನನಗೆ ಇಲ್ಲಿ ನ್ಯಾಯ ಸಿಗುತ್ತದೆಯೇ ಎಂಬ ಬಗ್ಗೆ ಗಂಭೀರ ಅನುಮಾನಗಳು ಮತ್ತು ಆತಂಕಗಳು ಶುರುವಾಗಿವೆ” ಎಂದಿದ್ದಾರೆ. ಅಷ್ಟೇ ಅಲ್ಲದೆ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳು ಸೇರಿದಂತೆ ಐದು ವಿಷಯಗಳಲ್ಲಿ ನ್ಯಾಯಮೂರ್ತಿಗಳು ನೀಡಿದ ಆದೇಶಗಳು ಬಹುತೇಕ ಅಂತಿಮ ತೀರ್ಪು ನೀಡಿದಂತೆಯೇ ಇವೆ ಎಂದು ಕೇಜ್ರಿವಾಲ್ ಪರ ವಕೀಲರು ವಾದ ಮಂಡಿಸಿದ್ದಾರೆ.

ಕಳೆದ ವಿಚಾರಣೆಯ ಸಮಯದಲ್ಲಿ, ಕೇಜ್ರಿವಾಲ್ ಅವರು ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ (recusal) ಅರ್ಜಿಯ ಬಗ್ಗೆ ವೈಯಕ್ತಿಕವಾಗಿ ವಾದ ಮಂಡಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಜ್ರಿವಾಲ್ ವೈಯಕ್ತಿಕವಾಗಿ ವಾದ ಮಂಡಿಸಲು ಬಯಸಿದರೆ ಮೊದಲು ತಮ್ಮ ಪರ ವಕೀಲರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದರು. ಈ ನ್ಯಾಯಾಲಯ ನಿಮ್ಮ ಅತಿರಂಜಿತ ನಾಟಕೀಯ ಪ್ರದರ್ಶನಗಳಿಗೆ ವೇದಿಕೆಯಲ್ಲ ಎಂದು ಮಾರ್ಮಿಕವಾಗಿ ಟೀಕಿಸಿದ್ದರು.

ಕಳೆದ ವಿಚಾರಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಐವರು ಆರೋಪಿಗಳು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರಮುಖ ಕಾರಣವಾಗಿ ಅವರು ‘ಅಖಿಲ ಭಾರತೀಯ ಅಧಿವಕ್ತ ಪರಿಷತ್’ (ಎಬಿಎಪಿ) ನೊಂದಿಗೆ ನ್ಯಾಯಮೂರ್ತಿಗಳು ಹೊಂದಿದ್ದಾರೆನ್ನಲಾದ ಸೌಹಾರ್ದಯುತ ಸಂಬಂಧ ಮತ್ತು ವೈಚಾರಿಕ ಒಡನಾಟವನ್ನು ಉಲ್ಲೇಖಿಸಿದ್ದರು. ವಕೀಲರ ಸಂಘಟನೆಯಾದ ಎಬಿಎಪಿ, ಆರ್‌ಎಸ್‌ಎಸ್‌ನ ಒಂದು ಅಂಗಸಂಸ್ಥೆ ಎಂದು ಪರಿಗಣಿಸಲ್ಪಟ್ಟಿದೆ. ನ್ಯಾಯಮೂರ್ತಿಗಳು ಈ ಸಂಘಟನೆಯ ಕಾರ್ಯಕ್ರಮಗಳಲ್ಲಿ ಈ ಹಿಂದೆ ಭಾಗವಹಿಸಿರುವುದು ತಮಗೆ ನ್ಯಾಯ ಸಿಗುವ ಬಗ್ಗೆ ‘ಪಕ್ಷಪಾತದ ಆತಂಕ’ ಮೂಡಿಸಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಕೇಜ್ರಿವಾಲ್ ವಾದ ಆಲಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, “ನ್ಯಾಯಾಧೀಶರು ಪ್ರಕರಣದಿಂದ ಹಿಂದೆ ಸರಿಯುವ (Recusal) ಕಾನೂನಿನ ಬಗ್ಗೆ ನಾನು ಸಾಕಷ್ಟು ತಿಳಿದುಕೊಂಡೆ. ನನ್ನ ಜೀವನದಲ್ಲೇ ಮೊದಲ ಬಾರಿಗೆ ಯಾರೋ ಒಬ್ಬರು ನನ್ನನ್ನು ಈ ಕೇಸ್‌ನಿಂದ ಹಿಂದೆ ಸರಿಯಲು ಕೇಳಿಕೊಂಡಿದ್ದಾರೆ. ಇದರಿಂದ ನನಗೆ ಹೊಸ ವಿಷಯಗಳು ತಿಳಿಯಲು ಸಾಧ್ಯವಾಯಿತು. ಈ ಪ್ರಕರಣದಲ್ಲಿ ನಾನು ಒಂದು ಉತ್ತಮ ತೀರ್ಪು ನೀಡುತ್ತೇನೆ ಎಂಬ ಭರವಸೆ ನನಗಿದೆ” ಎಂದು ಹೇಳಿದ್ದಾರೆ. ಆದೇಶ ಕಾಯ್ದಿರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸಿಬಿಐ ಏಪ್ರಿಲ್ 7ರಂದು ಸಲ್ಲಿಸಿದ ತನ್ನ ಅಫಿಡವಿಟ್‌ನಲ್ಲಿ ಕೇಜ್ರಿವಾಲ್ ಅವರ ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ ಕೋರಿಕೆಯನ್ನು ಬಲವಾಗಿ ವಿರೋಧಿಸಿದೆ. “ಕಾನೂನು ವಿಚಾರಗೋಷ್ಠಿಯ ವಿಷಯವು ರಾಜಕೀಯವಾಗಿಲ್ಲದಿದ್ದಾಗ, ಅದರಲ್ಲಿ ಭಾಗವಹಿಸುವುದು ವಿಚಾರಣೆಯಿಂದ ಹಿಂದೆ ಸರಿಯಲು ಎಂದಿಗೂ ಕಾರಣವಾಗಲಾರದು. ಆದ್ದರಿಂದ ಇದು ಯಾವುದೇ ಸದ್ಧಾಂತಿಕ ಸಂಬಂಧವನ್ನು ಪ್ರದರ್ಶಿಸುವುದಿಲ್ಲ” ಎಂದು ಸಿಬಿಐ ಹೇಳಿದೆ. ನ್ಯಾಯಮೂರ್ತಿಗಳ ಮೇಲೆ ಪಕ್ಷಪಾತದ ಆರೋಪ ಹೊರಿಸಲು ಇಂತಹ ನಿರ್ಲಜ್ಜ ಮತ್ತು ವ್ಯಾಪಕವಾದ ಆಕ್ಷೇಪಗಳನ್ನು ಮಾಡುವುದು ನ್ಯಾಯಾಲಯದ ನಿಂದನೆಯಾಗುತ್ತದೆ ಎಂದು ಸಿಬಿಐ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...