Homeಮುಖಪುಟಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

ಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

- Advertisement -
- Advertisement -

ಪ್ರತಿ ಶುಕ್ರವಾರ ಮಧ್ಯಾಹ್ನದ ನಮಾಜಿಗೆ ಮೊದಲು ಮಸೀದಿಗಳಲ್ಲಿ ನೀಡುವ ಧರ್ಮೋಪದೇಶದ ವಿಷಯವನ್ನು ವಕ್ಫ್‌ ಬೋರ್ಡ್‌ಗೆ ತಿಳಿಸುವಂತೆ ಮತ್ತು ಅದಕ್ಕಾಗಿ ಅನುಮತಿ ಪಡೆಯುವಂತೆ ಬಿಜೆಪಿ ಆಡಳಿತದ ಛತ್ತೀಸ್‌ಗಢ ರಾಜ್ಯ ವಕ್ಫ್ ಬೋರ್ಡ್ ರಾಜ್ಯದ ಎಲ್ಲಾ ಮಸೀದಿಗಳ ಮುತವಲ್ಲಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ರೀತಿಯ ಸುತ್ತೋಲೆ ದೇಶದಲ್ಲೆ ಮೊದಲ ಬಾರಿಗೆ ನೀಡಲಾಗಿದೆ. ಮಸೀದಿಯ ಶುಕ್ರವಾರದ

ಮುಸ್ಲಿಮರು ದೇವರ ಹೆಸರಿನಲ್ಲಿ ಅರ್ಪಿಸಿ ವಕ್ಫ್ ಮಾಡಿರುವ ಆಸ್ತಿಗಳನ್ನು ನಿರ್ವಹಿಸಲು ಮತ್ತು ಅದನ್ನು ರಕ್ಷಿಸಲು ಸರ್ಕಾರಗಳು ರಚಿಸುವ ಮಂಡಳಿಯಾಗಿದೆ ವಕ್ಫ್‌ ಬೋರ್ಡ್‌. ಮಸೀದಿಯ ಶುಕ್ರವಾರದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿ ಶುಕ್ರವಾರ ಜುಮ್ಮಾ ನಮಾಝ್‌ಗೆ ಮುನ್ನ ಮಾಡುವ ಭಾಷಣಗಳಲ್ಲಿ ಯಾವುದೇ ರಾಜಕೀಯ ಬಣ್ಣ ಇರಬಾರದು. ಕೆಲವೊಮ್ಮೆ, ಮಸೀದಿಗಳಿಂದ ಫತ್ವಾಗಳನ್ನು ನೀಡಲಾಗುತ್ತದೆ ಅಥವಾ ಕೆಲವು ರಾಜಕೀಯ ಪಕ್ಷಗಳಿಗೆ ಬೆಂಬಲವನ್ನು ನೀಡಲಾಗುತ್ತದೆ.” ಎಂದು ಛತ್ತೀಸ್‌ಗಢ ವಕ್ಫ್ ಮಂಡಳಿಯ ಅಧ್ಯಕ್ಷ ಸಲೀಂ ರಾಜ್ ಶನಿವಾರ ತಿಳಿಸಿದ್ದಾರೆ.

“ಮಸೀದಿಗಳು ತಮ್ಮನ್ನು ಧಾರ್ಮಿಕ ಉಪದೇಶ ಅಥವಾ ಆಚರಣೆಗಳಿಗೆ ಸೀಮಿತಗೊಳಿಸಬೇಕು. ಅದು ರಾಜಕೀಯ ಅಡ್ಡ ಆಗಬಾರದು. ಹಾಗಾಗಿ, ತಮ್ಮ ಧರ್ಮೋಪದೇಶದ ವಿಷಯಗಳ ಬಗ್ಗೆ ವಕ್ಫ್ ಬೋರ್ಡ್‌ಗೆ ತಿಳಿಸಲು ಮತ್ತು ನಮ್ಮ ಒಪ್ಪಿಗೆ ಪಡೆಯುವಂತೆ ನಾನು ಎಲ್ಲಾ ಮುತವಲ್ಲಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಮಸೀದಿಗಳು ಮತ್ತು ದರ್ಗಾಗಳು ವಕ್ಫ್ ಮಂಡಳಿಯ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ತಮ್ಮ ಸುತ್ತೋಲೆಯನ್ನು ಮೀರುವಂತಿಲ್ಲ ಎಂದು ಅವರು ವಾದಿಸಿದ್ದಾರೆ. ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ, ವಿಶೇಷವಾಗಿ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ಇಮಾಮ್‌ಗಳನ್ನು ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಕ್ಫ್‌ ಬೋರ್ಡ್‌ನ ಈ ಸುತ್ತೋಲೆಗೆ ವಿರೋಧ ಪಕ್ಷದ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ದೇಶನ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಬಣ್ಣಿಸಿದೆ.

“ರಾಜ್ಯ ವಕ್ಫ್ ಮಂಡಳಿಯು ವಿನಾಕಾರಣ ತನ್ನ ಮಿತಿಯನ್ನು ಮೀರಿದೆ. ವಕ್ಫ್ ಆಸ್ತಿಗಳನ್ನು ಮೇಲ್ವಿಚಾರಣೆ ಮಾಡಲು ಉದ್ದೇಶದಿಂದ ವಕ್ಫ್ ಬೋರ್ಡ್‌ ರಚಿಸಲಾಗಿದೆ. ಅದು ಬಿಟ್ಟು ಧಾರ್ಮಿಕ ಬೋಧಕರಿಗೆ ಅಥವಾ ಇಮಾಮ್‌ಗಳಿಗೆ ಷರತ್ತುಗಳನ್ನು ನಿರ್ದೇಶಿಸುವುದು ಅದರ ಕೆಲಸವಲ್ಲ” ಎಂದು ಕಾಂಗ್ರೆಸ್ ಮೀಡಿಯಾ ಸೆಲ್‌ನ ಅಧ್ಯಕ್ಷ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...