Homeಮುಖಪುಟಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

ಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

- Advertisement -
- Advertisement -

ಪ್ರತಿ ಶುಕ್ರವಾರ ಮಧ್ಯಾಹ್ನದ ನಮಾಜಿಗೆ ಮೊದಲು ಮಸೀದಿಗಳಲ್ಲಿ ನೀಡುವ ಧರ್ಮೋಪದೇಶದ ವಿಷಯವನ್ನು ವಕ್ಫ್‌ ಬೋರ್ಡ್‌ಗೆ ತಿಳಿಸುವಂತೆ ಮತ್ತು ಅದಕ್ಕಾಗಿ ಅನುಮತಿ ಪಡೆಯುವಂತೆ ಬಿಜೆಪಿ ಆಡಳಿತದ ಛತ್ತೀಸ್‌ಗಢ ರಾಜ್ಯ ವಕ್ಫ್ ಬೋರ್ಡ್ ರಾಜ್ಯದ ಎಲ್ಲಾ ಮಸೀದಿಗಳ ಮುತವಲ್ಲಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ರೀತಿಯ ಸುತ್ತೋಲೆ ದೇಶದಲ್ಲೆ ಮೊದಲ ಬಾರಿಗೆ ನೀಡಲಾಗಿದೆ. ಮಸೀದಿಯ ಶುಕ್ರವಾರದ

ಮುಸ್ಲಿಮರು ದೇವರ ಹೆಸರಿನಲ್ಲಿ ಅರ್ಪಿಸಿ ವಕ್ಫ್ ಮಾಡಿರುವ ಆಸ್ತಿಗಳನ್ನು ನಿರ್ವಹಿಸಲು ಮತ್ತು ಅದನ್ನು ರಕ್ಷಿಸಲು ಸರ್ಕಾರಗಳು ರಚಿಸುವ ಮಂಡಳಿಯಾಗಿದೆ ವಕ್ಫ್‌ ಬೋರ್ಡ್‌. ಮಸೀದಿಯ ಶುಕ್ರವಾರದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿ ಶುಕ್ರವಾರ ಜುಮ್ಮಾ ನಮಾಝ್‌ಗೆ ಮುನ್ನ ಮಾಡುವ ಭಾಷಣಗಳಲ್ಲಿ ಯಾವುದೇ ರಾಜಕೀಯ ಬಣ್ಣ ಇರಬಾರದು. ಕೆಲವೊಮ್ಮೆ, ಮಸೀದಿಗಳಿಂದ ಫತ್ವಾಗಳನ್ನು ನೀಡಲಾಗುತ್ತದೆ ಅಥವಾ ಕೆಲವು ರಾಜಕೀಯ ಪಕ್ಷಗಳಿಗೆ ಬೆಂಬಲವನ್ನು ನೀಡಲಾಗುತ್ತದೆ.” ಎಂದು ಛತ್ತೀಸ್‌ಗಢ ವಕ್ಫ್ ಮಂಡಳಿಯ ಅಧ್ಯಕ್ಷ ಸಲೀಂ ರಾಜ್ ಶನಿವಾರ ತಿಳಿಸಿದ್ದಾರೆ.

“ಮಸೀದಿಗಳು ತಮ್ಮನ್ನು ಧಾರ್ಮಿಕ ಉಪದೇಶ ಅಥವಾ ಆಚರಣೆಗಳಿಗೆ ಸೀಮಿತಗೊಳಿಸಬೇಕು. ಅದು ರಾಜಕೀಯ ಅಡ್ಡ ಆಗಬಾರದು. ಹಾಗಾಗಿ, ತಮ್ಮ ಧರ್ಮೋಪದೇಶದ ವಿಷಯಗಳ ಬಗ್ಗೆ ವಕ್ಫ್ ಬೋರ್ಡ್‌ಗೆ ತಿಳಿಸಲು ಮತ್ತು ನಮ್ಮ ಒಪ್ಪಿಗೆ ಪಡೆಯುವಂತೆ ನಾನು ಎಲ್ಲಾ ಮುತವಲ್ಲಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಮಸೀದಿಗಳು ಮತ್ತು ದರ್ಗಾಗಳು ವಕ್ಫ್ ಮಂಡಳಿಯ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ತಮ್ಮ ಸುತ್ತೋಲೆಯನ್ನು ಮೀರುವಂತಿಲ್ಲ ಎಂದು ಅವರು ವಾದಿಸಿದ್ದಾರೆ. ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ, ವಿಶೇಷವಾಗಿ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ಇಮಾಮ್‌ಗಳನ್ನು ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಕ್ಫ್‌ ಬೋರ್ಡ್‌ನ ಈ ಸುತ್ತೋಲೆಗೆ ವಿರೋಧ ಪಕ್ಷದ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ದೇಶನ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಬಣ್ಣಿಸಿದೆ.

“ರಾಜ್ಯ ವಕ್ಫ್ ಮಂಡಳಿಯು ವಿನಾಕಾರಣ ತನ್ನ ಮಿತಿಯನ್ನು ಮೀರಿದೆ. ವಕ್ಫ್ ಆಸ್ತಿಗಳನ್ನು ಮೇಲ್ವಿಚಾರಣೆ ಮಾಡಲು ಉದ್ದೇಶದಿಂದ ವಕ್ಫ್ ಬೋರ್ಡ್‌ ರಚಿಸಲಾಗಿದೆ. ಅದು ಬಿಟ್ಟು ಧಾರ್ಮಿಕ ಬೋಧಕರಿಗೆ ಅಥವಾ ಇಮಾಮ್‌ಗಳಿಗೆ ಷರತ್ತುಗಳನ್ನು ನಿರ್ದೇಶಿಸುವುದು ಅದರ ಕೆಲಸವಲ್ಲ” ಎಂದು ಕಾಂಗ್ರೆಸ್ ಮೀಡಿಯಾ ಸೆಲ್‌ನ ಅಧ್ಯಕ್ಷ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...