Homeಮುಖಪುಟಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

ಮಸೀದಿಯ ಶುಕ್ರವಾರದ ಭಾಷಣಗಳಿಗೆ ಅನುಮತಿ ಪಡೆಯಿರಿ: ವಕ್ಫ್ ಬೋರ್ಡ್ ಮುಖ್ಯಸ್ಥ

- Advertisement -
- Advertisement -

ಪ್ರತಿ ಶುಕ್ರವಾರ ಮಧ್ಯಾಹ್ನದ ನಮಾಜಿಗೆ ಮೊದಲು ಮಸೀದಿಗಳಲ್ಲಿ ನೀಡುವ ಧರ್ಮೋಪದೇಶದ ವಿಷಯವನ್ನು ವಕ್ಫ್‌ ಬೋರ್ಡ್‌ಗೆ ತಿಳಿಸುವಂತೆ ಮತ್ತು ಅದಕ್ಕಾಗಿ ಅನುಮತಿ ಪಡೆಯುವಂತೆ ಬಿಜೆಪಿ ಆಡಳಿತದ ಛತ್ತೀಸ್‌ಗಢ ರಾಜ್ಯ ವಕ್ಫ್ ಬೋರ್ಡ್ ರಾಜ್ಯದ ಎಲ್ಲಾ ಮಸೀದಿಗಳ ಮುತವಲ್ಲಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ರೀತಿಯ ಸುತ್ತೋಲೆ ದೇಶದಲ್ಲೆ ಮೊದಲ ಬಾರಿಗೆ ನೀಡಲಾಗಿದೆ. ಮಸೀದಿಯ ಶುಕ್ರವಾರದ

ಮುಸ್ಲಿಮರು ದೇವರ ಹೆಸರಿನಲ್ಲಿ ಅರ್ಪಿಸಿ ವಕ್ಫ್ ಮಾಡಿರುವ ಆಸ್ತಿಗಳನ್ನು ನಿರ್ವಹಿಸಲು ಮತ್ತು ಅದನ್ನು ರಕ್ಷಿಸಲು ಸರ್ಕಾರಗಳು ರಚಿಸುವ ಮಂಡಳಿಯಾಗಿದೆ ವಕ್ಫ್‌ ಬೋರ್ಡ್‌. ಮಸೀದಿಯ ಶುಕ್ರವಾರದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿ ಶುಕ್ರವಾರ ಜುಮ್ಮಾ ನಮಾಝ್‌ಗೆ ಮುನ್ನ ಮಾಡುವ ಭಾಷಣಗಳಲ್ಲಿ ಯಾವುದೇ ರಾಜಕೀಯ ಬಣ್ಣ ಇರಬಾರದು. ಕೆಲವೊಮ್ಮೆ, ಮಸೀದಿಗಳಿಂದ ಫತ್ವಾಗಳನ್ನು ನೀಡಲಾಗುತ್ತದೆ ಅಥವಾ ಕೆಲವು ರಾಜಕೀಯ ಪಕ್ಷಗಳಿಗೆ ಬೆಂಬಲವನ್ನು ನೀಡಲಾಗುತ್ತದೆ.” ಎಂದು ಛತ್ತೀಸ್‌ಗಢ ವಕ್ಫ್ ಮಂಡಳಿಯ ಅಧ್ಯಕ್ಷ ಸಲೀಂ ರಾಜ್ ಶನಿವಾರ ತಿಳಿಸಿದ್ದಾರೆ.

“ಮಸೀದಿಗಳು ತಮ್ಮನ್ನು ಧಾರ್ಮಿಕ ಉಪದೇಶ ಅಥವಾ ಆಚರಣೆಗಳಿಗೆ ಸೀಮಿತಗೊಳಿಸಬೇಕು. ಅದು ರಾಜಕೀಯ ಅಡ್ಡ ಆಗಬಾರದು. ಹಾಗಾಗಿ, ತಮ್ಮ ಧರ್ಮೋಪದೇಶದ ವಿಷಯಗಳ ಬಗ್ಗೆ ವಕ್ಫ್ ಬೋರ್ಡ್‌ಗೆ ತಿಳಿಸಲು ಮತ್ತು ನಮ್ಮ ಒಪ್ಪಿಗೆ ಪಡೆಯುವಂತೆ ನಾನು ಎಲ್ಲಾ ಮುತವಲ್ಲಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಮಸೀದಿಗಳು ಮತ್ತು ದರ್ಗಾಗಳು ವಕ್ಫ್ ಮಂಡಳಿಯ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ತಮ್ಮ ಸುತ್ತೋಲೆಯನ್ನು ಮೀರುವಂತಿಲ್ಲ ಎಂದು ಅವರು ವಾದಿಸಿದ್ದಾರೆ. ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ, ವಿಶೇಷವಾಗಿ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ಇಮಾಮ್‌ಗಳನ್ನು ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಕ್ಫ್‌ ಬೋರ್ಡ್‌ನ ಈ ಸುತ್ತೋಲೆಗೆ ವಿರೋಧ ಪಕ್ಷದ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ದೇಶನ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಬಣ್ಣಿಸಿದೆ.

“ರಾಜ್ಯ ವಕ್ಫ್ ಮಂಡಳಿಯು ವಿನಾಕಾರಣ ತನ್ನ ಮಿತಿಯನ್ನು ಮೀರಿದೆ. ವಕ್ಫ್ ಆಸ್ತಿಗಳನ್ನು ಮೇಲ್ವಿಚಾರಣೆ ಮಾಡಲು ಉದ್ದೇಶದಿಂದ ವಕ್ಫ್ ಬೋರ್ಡ್‌ ರಚಿಸಲಾಗಿದೆ. ಅದು ಬಿಟ್ಟು ಧಾರ್ಮಿಕ ಬೋಧಕರಿಗೆ ಅಥವಾ ಇಮಾಮ್‌ಗಳಿಗೆ ಷರತ್ತುಗಳನ್ನು ನಿರ್ದೇಶಿಸುವುದು ಅದರ ಕೆಲಸವಲ್ಲ” ಎಂದು ಕಾಂಗ್ರೆಸ್ ಮೀಡಿಯಾ ಸೆಲ್‌ನ ಅಧ್ಯಕ್ಷ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ಕ್ಯಾಲಿಫೋರ್ನಿಯಾದಲ್ಲಿ ‘ಎಂ ಫಾಕ್ಸ್‌’ ಮೊದಲ ಪ್ರಕರಣ ಪತ್ತೆ; ಖಚಿತಪಡಿಸಿದ ಯುಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...