Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...