Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...