Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...