Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...