Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...