Homeಎಕಾನಮಿಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು.

- Advertisement -
- Advertisement -

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು. ಸಿಮೋನ್ ಡಿ ಬೋವಾ ನಾನು ಮಹಿಳೆಯಾಗಿ ಹುಟ್ಟಲಿಲ್ಲ, ಆದರೆ ಆಗಲ್ಪಟ್ಟೆ ಎಂದಿದ್ದರು. ಸಮಾಜ ವ್ಯಕ್ತಿ ಮತ್ತು ವ್ಯಕ್ತಿತ್ವದ ಸೃಷ್ಟಿಗೆ ನೀಡುವ ಅಪಾರವಾದ ಸಕಾರಾತ್ಮಕ ಅಥವ ನಕಾರಾತ್ಮಕ ಕೊಡುಗೆಯನ್ನು ಈ ಹೇಳಿಕೆಗಳಲ್ಲಿ ಕಾಣಬಹುದು.

ಥಾಮಸ್ ಪಿಕೆಟಿ

ಈ ಶತಮಾನದ ಅತಿ ಹೆಚ್ಚು ಪ್ರಭಾವಿಸಿದ ಅರ್ಥಶಾಸ್ರಜ್ಞರನ್ನಾಗಿ ಥಾಮಸ್ ಪಿಕೆಟಿಯವರನ್ನು ಗುರುತಿಸುತ್ತಾರೆ. ಅವರ ಕ್ಯಾಪಿಟಲ್ ಇನ್ ದಿ 21ನೇ ಶತಮಾನದ ಒಂದು ಮೈಲುಗಲ್ಲು ಎಂದೇ ಪರಿಗಣಿಸಲಾಗಿದೆ. ಅವರ ಇತ್ತೀಚಿನ ಪುಸ್ತಕ ಕ್ಯಾಪಿಟಲ್ ಅಂಡ್ ಐಡಿಯಾಲಜಿ ಕೂಡಾ ಅದೇ ಮಟ್ಟದಲ್ಲಿ ಜಗತ್ತಿನಾದ್ಯಂತ ಚರ್ಚೆ ಆಗುತ್ತಿರುವ ಪುಸ್ತಕ. 1039 ಪುಟದ ಈ ಪುಸ್ತಕ ಒತ್ತಿ ಹೇಳುವುದು ಆರ್ಥಿಕ ಅಸಮಾನತೆಗೆ ಸಾಮಾಜಿಕ, ಸಾಂಸ್ಥಿಕ, ಸೈದ್ಧಾಂತಿಕ ಮತ್ತು ರಾಜಕೀಯ ಆಯಾಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು.

ಕಾರ್ಲ್ ಮಾರ್ಕ್ಸ್ ನ ವರ್ಗ ಸಂಘರ್ಷದ ಹೊರತಾಗಿ, ಸಾಮಾಜಿಕ ಆಯಾಮಗಳಾದ ಜಾತಿ, ಲಿಂಗ, ಬಣ್ಣ, ಧಾರ್ಮಿಕ ಸಂಘಟನೆಗಳು ವ್ಯಕ್ತಿಯನ್ನು ಕೃತಕವಾಗಿ ಮೇಲಿನ ಸ್ಥರದಲ್ಲಿಟ್ಟು ಬಹುಜನರನ್ನು ಹತ್ತಿಕ್ಕಿ ಹತೋಟಿಯಲ್ಲಿಡುವ ಕಾರ್ಯವನ್ನು ಪಿಕೆಟಿ ಐತಿಹಾಸಿಕವಾಗಿ ವಿಸ್ತರಿಸುತ್ತಾ ಹೋಗುತ್ತಾರೆ. ಅಂಕಿ ಅಂಶಗಳಿಲ್ಲದೆ ಪಿಕೆಟಿ ಏನನ್ನೂ ಹೇಳಹೋಗುವುದಿಲ್ಲ. ನಮ್ಮಲ್ಲಿ ಹೀಗೆ ಹೇಳುವುದುಂಟು, ದತ್ತಾಂಶಗಳನ್ನು ನೀಡಿದರೆ ನನ್ನ ದಿಕ್ಕು ಬದಲಿಸುತ್ತೇನೆ ಎಂದು. ಇದಕ್ಕೆ ತಕ್ಕಂತೆ ಪಿಕೆಟಿ ಅನೇಕ ದೇಶಗಳ ಮತ್ತು ಸಾಮ್ರಾಜ್ಯಗಳ ಆಡಳಿತ, ಶ್ರೇಣೀಕೃತ ವರ್ಗ, ಕಾನೂನು ಮತ್ತು ತೆರಿಗೆಗಳ ಮೂಲಕ ಹೇಗೆ ಆರ್ಥಿಕ ಅಸಮಾನತೆಯನ್ನು ಉಂಟುಮಾಡಿವೆ ಎನ್ನುವುದನ್ನು ವಿಸ್ತರಿಸುತ್ತಾರೆ.

ವಿಜಯನಗರ ಸಾಮ್ರಾಜ್ಯದಲ್ಲಿ ಬ್ರಾಹ್ಮಣ ಕ್ಷತ್ರಿಯ ವರ್ಣಗಳ ಒಡಂಬಡಿಕೆ, ಬ್ರಾಹ್ಮಣರಿಗೆ ಭೂದಾನಗಳನ್ನು ಮಾಡಿದ್ದು ಹಾಗೂ ಪುದುಕೊಟ್ಟೆಯಲ್ಲಿ ಕಲಾರ್ಸ್ ದಲಿತರು ಪಟ್ಟಕ್ಕೇರಿದ ಮೇಲೇ ಅವರನ್ನು ಕ್ಷತ್ರಿಯ ವರ್ಣಕ್ಕೆ ಸೇರಿಸಲು ಬ್ರಾಹ್ಮಣ ವರ್ಗದ ಮುದ್ರೆಯ ಅವಶ್ಯಕತೆ ಉಂಟುಮಾಡಿ, ಆ ಪಟ್ಟಕ್ಕಾಗಿ ಬ್ರಾಹ್ಮಣರು ಗಿಟ್ಟಿಸಿಕೊಂಡ ಭೂಮಿ ಮತ್ತು ಗಳಿಸಿದ ಸಂಪತ್ತನ್ನು ವಿವರಿಸುತ್ತಾನೆ. ಶಿವಾಜಿ ಮಹರಾಜ ಕೂಡಾ ಇದೇ ರೀತಿಯ ಒಡಂಬಡಿಕೆ ಮಾಡಿಕೊಳ್ಳಬೇಕಾದ ಪ್ರಸಂಗವು ಬರುತ್ತದೆ. ಈ ರೀತಿ ಆರ್ಥಿಕ ಮುಗ್ಗಟ್ಟಿಗೆ ಅಸಮಾನತೆಗೆ ಸಾಮಾಜಿಕ ಆಯಾಮ ಹೇಗೆ ಕಾರಣ ಎಂದು ಗಣನೀಯವಾಗಿ ಪರಿಗಣಿಸಿ ವಿವರಿಸುತ್ತಾರೆ ಪಿಕೆಟಿ.

ಇಂದಿಗೂ ಸಹ ರಾಜಕಾರಣ, ರಾಜ್ಯ ಮತ್ತು ಕೈಗಾರಿಕೋದ್ಯಮಿಗಳು ಹೇಗೆ ಪರಸ್ಪರ ತಮ್ಮ ತಮ್ಮನ್ನು ಭದ್ರಪಡಿಸಿಕೊಳ್ಳಲು ತಮಗೆ ಬೇಕಾದ ಕಾನೂನು ಮತ್ತು ನಿಯಮಾವಳಿಗಳನ್ನು ಆಗ್ಗಿಂದಾಗ್ಗೆ ರೂಪಿಸಿಕೊಳ್ಳುತ್ತಾರೆ (Regulated regulate regulators)ಎಂಬುದನ್ನು ವಿವರಿಸುತ್ತಾರೆ. ಇದೇ ಸಮಯದಲ್ಲಿ ಈ ಪ್ರಸಂಗ ನೆನಪಾಗುತ್ತದೆ: ಹಿಂದೊಮ್ಮೆ ಆಯವ್ಯಯದ ಮುಂಗಡ ಪತ್ರ ಲೋಕಸಭೆಯಲ್ಲಿ ಮಂಡನೆಯಾಗುವ ಮೊದಲೇ ಅಂಬಾನಿ ಮನೆಯಲ್ಲಿ ರೇಡ್ ಆದಾಗ ಸಿಕ್ಕಿಬಿತ್ತು. ಆಗ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಇದು ಹಣಕಾಸು ಸಚಿವಾಲಯ ಅಂಬಾನಿಗೆ ಮೊದಲೇ ಕೊಟ್ಟಿದ್ದೋ ಅಥವಾ ಅಂಬಾನಿಯೇ ಕೊಟ್ಟ ಪ್ರತಿಯೋ ಎಂದು ಬರೆದಿದ್ದರು. ನ್ಯೂಯಾರ್ಕರ್ ನಿಯತಕಾಲಿಕದ ಕಾರ್ಟೂನ್ ಒಂದು ಹೀಗೆ ಹೇಳುತ್ತದೆ., ಉದ್ಯೋಗಪತಿಗೆ ಒಬ್ಬ ಕೇಳುತ್ತಾನೆ, ನೀವು ಟೀಂ ಪ್ಲೇಯರ್ರೇ?ಎಂದು. ಆತ ಹೇಳುತ್ತಾನೆ, ಇಲ್ಲ, ನಾನು ಟೀಂ ಓನರೆಂದು. ನಮ್ಮ ಕ್ರಿಕೆಟ್ ಟೀಂಗೂ ಇದನ್ನು ಹೋಲಿಸಬಹುದು.

ಭಾರತದೇಶ ಸಾಮಾಜಿಕ ಚಲನಶೀಲತೆಯಲ್ಲಿ ಅತ್ಯಂತ ಕಳಪೆ ಸ್ಥಾನವನ್ನು ಹೊಂದಿದೆ. ಕಳೆದ ವರ್ಷ 82 ದೇಶಗಳಲ್ಲಿ 76ನೇ ಸ್ಥಾನವನ್ನು ಪಡೆದಿತ್ತು. ಅತ್ಯಂತ ಕೆಳಮಟ್ಟದ ಈ ಸ್ಥಾನಕ್ಕೆ ನಮ್ಮಲ್ಲಿನ ಜಾತಿ, ವರ್ಣಬೇಧ ನೀತಿ, ಆರ್ಥಿಕ ಅಸಮಾನತೆ ಕಾರಣ. ಇವೆಲ್ಲವೂ ಸಾಮಾಜಿಕ ಮುಗ್ಗಟ್ಟಿನ ಚಕ್ರವ್ಯೂಹದಿಂದ ಹೊರಕ್ಕೆ ದಾಟಿ ಹೋಗದಂತೆ ತಡೆಗೋಡೆ ಹಾಕಿ ನೋಡಿಕೊಳ್ಳುತ್ತವೆ. ಸೋಶಿಯಲ್ ಮೊಬಿಲಿಟಿ ಇಂಡೆಕ್ಸ್ ಎಂದು ಹೇಳುವ ಈ ಸಾಮಾಜಿಕ ಚಲನಶೀಲತೆಗೆ ನಮ್ಮ ಸಾಂಸ್ಥಿಕ ಸಂಘಟನೆಗಳು, ಧರ್ಮ ಮತ್ತು ಜಾತಿ ವ್ಯವಸ್ಥೆ ಬಲಿಷ್ಟ ತಡೆಗೋಡೆಗಳಾಗಿ ನಿಂತಿವೆ. ಆರ್ಥಿಕ ಅಸಮಾನತೆ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಂಗತಿ. ವಿಪರ್ಯಾಸವೆಂದರೆ ಕೊರೊನ ಮಹಾಮಾರಿಯ ಕಾಲದಲ್ಲೂ ಬಿಲಿಯನೇರ್‌ಗಳ ಆಸ್ತಿ ಕೊರೋನ ಸೋಂಕು ಮತ್ತು ಸಾವನ್ನು ಮೀರಿ ಬೆಳೆಯುತ್ತಿದೆ. ಅಮೇರಿಕಾದ ಪ್ರಜಾಪ್ರಭುತ್ವವನ್ನು,‘by the 1%, of the 1%, for the 1%’  ಎನ್ನುವುದುಂಟು. ಆಸ್ತಿ ತೆರಿಗೆಯನ್ನು ಸಮಗ್ರವಾಗಿ ಅನುಸ್ಠಾನಗೊಳಿಸಿದ್ದಲ್ಲಿ ಆರ್ಥಿಕ ಅಸಮಾನತೆಯನ್ನು ಹೇಗೆ ತಡೆಗಟ್ಟಬಹುದು ಎನ್ನುವುದನ್ನು ಪಿಕೆಟಿ ಅನೇಕ ಉದಾಹರಣೆಗೊಳೊಂದಿಗೆ ವಿವರಿಸುತ್ತಾನೆ. ಫ್ರಾನ್ಸ್ ದೇಶದಲ್ಲಿ 19ನೇ ಶತಮಾನದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಬರುವ ಆಸ್ತಿಯ ಮೇಲೆ ಹಾಕಿದ ಕನಿಷ್ಟ ತೆರಿಗೆಯಿಂದ ಹೇಗೆ ಅಸಮಾನತೆಯನ್ನು ಹಿಂದಿಕ್ಕಲು ಸಾಧ್ಯವಾಯಿತೆಂದು ವಿವರಿಸುತ್ತಾನೆ. ಇಂದಿನ ಈ 1% ಪ್ರಜಾಪ್ರಭುತ್ವವನ್ನು ತಡೆಗಟ್ಟಲು ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.


ಇದನ್ನೂ ಓದಿ: ಭಾರತದಲ್ಲಿ ಧರ್ಮಗಳು ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಅರಿತ್ತಿದ್ದೇವೆಯೇ? : ಬಿ. ಶ್ರೀಪಾದ ಭಟ್

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...