Homeಎಕಾನಮಿಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಅಸಮಾನತೆ ನಿವಾರಣೆಗಾಗಿ ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು.

- Advertisement -
- Advertisement -

ಆಫ್ರಿಕಾ ಖಂಡದ ಅಮೇರಿಕದವನೊಬ್ಬ ಹೀಗೆ ಬರೆದುಕೊಂಡಿದ್ದಾನೆ, ನನಗೆ ಅವಮಾನ ಮತ್ತು ದ್ವೇಷ ತಿಳಿದಿರಲಿಲ್ಲ. ಅದನ್ನು ತಿಳಿಯಲು ಶಾಲೆಗೆ ಹೋಗಬೇಕಾಯಿತು. ಸಿಮೋನ್ ಡಿ ಬೋವಾ ನಾನು ಮಹಿಳೆಯಾಗಿ ಹುಟ್ಟಲಿಲ್ಲ, ಆದರೆ ಆಗಲ್ಪಟ್ಟೆ ಎಂದಿದ್ದರು. ಸಮಾಜ ವ್ಯಕ್ತಿ ಮತ್ತು ವ್ಯಕ್ತಿತ್ವದ ಸೃಷ್ಟಿಗೆ ನೀಡುವ ಅಪಾರವಾದ ಸಕಾರಾತ್ಮಕ ಅಥವ ನಕಾರಾತ್ಮಕ ಕೊಡುಗೆಯನ್ನು ಈ ಹೇಳಿಕೆಗಳಲ್ಲಿ ಕಾಣಬಹುದು.

ಥಾಮಸ್ ಪಿಕೆಟಿ

ಈ ಶತಮಾನದ ಅತಿ ಹೆಚ್ಚು ಪ್ರಭಾವಿಸಿದ ಅರ್ಥಶಾಸ್ರಜ್ಞರನ್ನಾಗಿ ಥಾಮಸ್ ಪಿಕೆಟಿಯವರನ್ನು ಗುರುತಿಸುತ್ತಾರೆ. ಅವರ ಕ್ಯಾಪಿಟಲ್ ಇನ್ ದಿ 21ನೇ ಶತಮಾನದ ಒಂದು ಮೈಲುಗಲ್ಲು ಎಂದೇ ಪರಿಗಣಿಸಲಾಗಿದೆ. ಅವರ ಇತ್ತೀಚಿನ ಪುಸ್ತಕ ಕ್ಯಾಪಿಟಲ್ ಅಂಡ್ ಐಡಿಯಾಲಜಿ ಕೂಡಾ ಅದೇ ಮಟ್ಟದಲ್ಲಿ ಜಗತ್ತಿನಾದ್ಯಂತ ಚರ್ಚೆ ಆಗುತ್ತಿರುವ ಪುಸ್ತಕ. 1039 ಪುಟದ ಈ ಪುಸ್ತಕ ಒತ್ತಿ ಹೇಳುವುದು ಆರ್ಥಿಕ ಅಸಮಾನತೆಗೆ ಸಾಮಾಜಿಕ, ಸಾಂಸ್ಥಿಕ, ಸೈದ್ಧಾಂತಿಕ ಮತ್ತು ರಾಜಕೀಯ ಆಯಾಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು.

ಕಾರ್ಲ್ ಮಾರ್ಕ್ಸ್ ನ ವರ್ಗ ಸಂಘರ್ಷದ ಹೊರತಾಗಿ, ಸಾಮಾಜಿಕ ಆಯಾಮಗಳಾದ ಜಾತಿ, ಲಿಂಗ, ಬಣ್ಣ, ಧಾರ್ಮಿಕ ಸಂಘಟನೆಗಳು ವ್ಯಕ್ತಿಯನ್ನು ಕೃತಕವಾಗಿ ಮೇಲಿನ ಸ್ಥರದಲ್ಲಿಟ್ಟು ಬಹುಜನರನ್ನು ಹತ್ತಿಕ್ಕಿ ಹತೋಟಿಯಲ್ಲಿಡುವ ಕಾರ್ಯವನ್ನು ಪಿಕೆಟಿ ಐತಿಹಾಸಿಕವಾಗಿ ವಿಸ್ತರಿಸುತ್ತಾ ಹೋಗುತ್ತಾರೆ. ಅಂಕಿ ಅಂಶಗಳಿಲ್ಲದೆ ಪಿಕೆಟಿ ಏನನ್ನೂ ಹೇಳಹೋಗುವುದಿಲ್ಲ. ನಮ್ಮಲ್ಲಿ ಹೀಗೆ ಹೇಳುವುದುಂಟು, ದತ್ತಾಂಶಗಳನ್ನು ನೀಡಿದರೆ ನನ್ನ ದಿಕ್ಕು ಬದಲಿಸುತ್ತೇನೆ ಎಂದು. ಇದಕ್ಕೆ ತಕ್ಕಂತೆ ಪಿಕೆಟಿ ಅನೇಕ ದೇಶಗಳ ಮತ್ತು ಸಾಮ್ರಾಜ್ಯಗಳ ಆಡಳಿತ, ಶ್ರೇಣೀಕೃತ ವರ್ಗ, ಕಾನೂನು ಮತ್ತು ತೆರಿಗೆಗಳ ಮೂಲಕ ಹೇಗೆ ಆರ್ಥಿಕ ಅಸಮಾನತೆಯನ್ನು ಉಂಟುಮಾಡಿವೆ ಎನ್ನುವುದನ್ನು ವಿಸ್ತರಿಸುತ್ತಾರೆ.

ವಿಜಯನಗರ ಸಾಮ್ರಾಜ್ಯದಲ್ಲಿ ಬ್ರಾಹ್ಮಣ ಕ್ಷತ್ರಿಯ ವರ್ಣಗಳ ಒಡಂಬಡಿಕೆ, ಬ್ರಾಹ್ಮಣರಿಗೆ ಭೂದಾನಗಳನ್ನು ಮಾಡಿದ್ದು ಹಾಗೂ ಪುದುಕೊಟ್ಟೆಯಲ್ಲಿ ಕಲಾರ್ಸ್ ದಲಿತರು ಪಟ್ಟಕ್ಕೇರಿದ ಮೇಲೇ ಅವರನ್ನು ಕ್ಷತ್ರಿಯ ವರ್ಣಕ್ಕೆ ಸೇರಿಸಲು ಬ್ರಾಹ್ಮಣ ವರ್ಗದ ಮುದ್ರೆಯ ಅವಶ್ಯಕತೆ ಉಂಟುಮಾಡಿ, ಆ ಪಟ್ಟಕ್ಕಾಗಿ ಬ್ರಾಹ್ಮಣರು ಗಿಟ್ಟಿಸಿಕೊಂಡ ಭೂಮಿ ಮತ್ತು ಗಳಿಸಿದ ಸಂಪತ್ತನ್ನು ವಿವರಿಸುತ್ತಾನೆ. ಶಿವಾಜಿ ಮಹರಾಜ ಕೂಡಾ ಇದೇ ರೀತಿಯ ಒಡಂಬಡಿಕೆ ಮಾಡಿಕೊಳ್ಳಬೇಕಾದ ಪ್ರಸಂಗವು ಬರುತ್ತದೆ. ಈ ರೀತಿ ಆರ್ಥಿಕ ಮುಗ್ಗಟ್ಟಿಗೆ ಅಸಮಾನತೆಗೆ ಸಾಮಾಜಿಕ ಆಯಾಮ ಹೇಗೆ ಕಾರಣ ಎಂದು ಗಣನೀಯವಾಗಿ ಪರಿಗಣಿಸಿ ವಿವರಿಸುತ್ತಾರೆ ಪಿಕೆಟಿ.

ಇಂದಿಗೂ ಸಹ ರಾಜಕಾರಣ, ರಾಜ್ಯ ಮತ್ತು ಕೈಗಾರಿಕೋದ್ಯಮಿಗಳು ಹೇಗೆ ಪರಸ್ಪರ ತಮ್ಮ ತಮ್ಮನ್ನು ಭದ್ರಪಡಿಸಿಕೊಳ್ಳಲು ತಮಗೆ ಬೇಕಾದ ಕಾನೂನು ಮತ್ತು ನಿಯಮಾವಳಿಗಳನ್ನು ಆಗ್ಗಿಂದಾಗ್ಗೆ ರೂಪಿಸಿಕೊಳ್ಳುತ್ತಾರೆ (Regulated regulate regulators)ಎಂಬುದನ್ನು ವಿವರಿಸುತ್ತಾರೆ. ಇದೇ ಸಮಯದಲ್ಲಿ ಈ ಪ್ರಸಂಗ ನೆನಪಾಗುತ್ತದೆ: ಹಿಂದೊಮ್ಮೆ ಆಯವ್ಯಯದ ಮುಂಗಡ ಪತ್ರ ಲೋಕಸಭೆಯಲ್ಲಿ ಮಂಡನೆಯಾಗುವ ಮೊದಲೇ ಅಂಬಾನಿ ಮನೆಯಲ್ಲಿ ರೇಡ್ ಆದಾಗ ಸಿಕ್ಕಿಬಿತ್ತು. ಆಗ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಇದು ಹಣಕಾಸು ಸಚಿವಾಲಯ ಅಂಬಾನಿಗೆ ಮೊದಲೇ ಕೊಟ್ಟಿದ್ದೋ ಅಥವಾ ಅಂಬಾನಿಯೇ ಕೊಟ್ಟ ಪ್ರತಿಯೋ ಎಂದು ಬರೆದಿದ್ದರು. ನ್ಯೂಯಾರ್ಕರ್ ನಿಯತಕಾಲಿಕದ ಕಾರ್ಟೂನ್ ಒಂದು ಹೀಗೆ ಹೇಳುತ್ತದೆ., ಉದ್ಯೋಗಪತಿಗೆ ಒಬ್ಬ ಕೇಳುತ್ತಾನೆ, ನೀವು ಟೀಂ ಪ್ಲೇಯರ್ರೇ?ಎಂದು. ಆತ ಹೇಳುತ್ತಾನೆ, ಇಲ್ಲ, ನಾನು ಟೀಂ ಓನರೆಂದು. ನಮ್ಮ ಕ್ರಿಕೆಟ್ ಟೀಂಗೂ ಇದನ್ನು ಹೋಲಿಸಬಹುದು.

ಭಾರತದೇಶ ಸಾಮಾಜಿಕ ಚಲನಶೀಲತೆಯಲ್ಲಿ ಅತ್ಯಂತ ಕಳಪೆ ಸ್ಥಾನವನ್ನು ಹೊಂದಿದೆ. ಕಳೆದ ವರ್ಷ 82 ದೇಶಗಳಲ್ಲಿ 76ನೇ ಸ್ಥಾನವನ್ನು ಪಡೆದಿತ್ತು. ಅತ್ಯಂತ ಕೆಳಮಟ್ಟದ ಈ ಸ್ಥಾನಕ್ಕೆ ನಮ್ಮಲ್ಲಿನ ಜಾತಿ, ವರ್ಣಬೇಧ ನೀತಿ, ಆರ್ಥಿಕ ಅಸಮಾನತೆ ಕಾರಣ. ಇವೆಲ್ಲವೂ ಸಾಮಾಜಿಕ ಮುಗ್ಗಟ್ಟಿನ ಚಕ್ರವ್ಯೂಹದಿಂದ ಹೊರಕ್ಕೆ ದಾಟಿ ಹೋಗದಂತೆ ತಡೆಗೋಡೆ ಹಾಕಿ ನೋಡಿಕೊಳ್ಳುತ್ತವೆ. ಸೋಶಿಯಲ್ ಮೊಬಿಲಿಟಿ ಇಂಡೆಕ್ಸ್ ಎಂದು ಹೇಳುವ ಈ ಸಾಮಾಜಿಕ ಚಲನಶೀಲತೆಗೆ ನಮ್ಮ ಸಾಂಸ್ಥಿಕ ಸಂಘಟನೆಗಳು, ಧರ್ಮ ಮತ್ತು ಜಾತಿ ವ್ಯವಸ್ಥೆ ಬಲಿಷ್ಟ ತಡೆಗೋಡೆಗಳಾಗಿ ನಿಂತಿವೆ. ಆರ್ಥಿಕ ಅಸಮಾನತೆ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಂಗತಿ. ವಿಪರ್ಯಾಸವೆಂದರೆ ಕೊರೊನ ಮಹಾಮಾರಿಯ ಕಾಲದಲ್ಲೂ ಬಿಲಿಯನೇರ್‌ಗಳ ಆಸ್ತಿ ಕೊರೋನ ಸೋಂಕು ಮತ್ತು ಸಾವನ್ನು ಮೀರಿ ಬೆಳೆಯುತ್ತಿದೆ. ಅಮೇರಿಕಾದ ಪ್ರಜಾಪ್ರಭುತ್ವವನ್ನು,‘by the 1%, of the 1%, for the 1%’  ಎನ್ನುವುದುಂಟು. ಆಸ್ತಿ ತೆರಿಗೆಯನ್ನು ಸಮಗ್ರವಾಗಿ ಅನುಸ್ಠಾನಗೊಳಿಸಿದ್ದಲ್ಲಿ ಆರ್ಥಿಕ ಅಸಮಾನತೆಯನ್ನು ಹೇಗೆ ತಡೆಗಟ್ಟಬಹುದು ಎನ್ನುವುದನ್ನು ಪಿಕೆಟಿ ಅನೇಕ ಉದಾಹರಣೆಗೊಳೊಂದಿಗೆ ವಿವರಿಸುತ್ತಾನೆ. ಫ್ರಾನ್ಸ್ ದೇಶದಲ್ಲಿ 19ನೇ ಶತಮಾನದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಬರುವ ಆಸ್ತಿಯ ಮೇಲೆ ಹಾಕಿದ ಕನಿಷ್ಟ ತೆರಿಗೆಯಿಂದ ಹೇಗೆ ಅಸಮಾನತೆಯನ್ನು ಹಿಂದಿಕ್ಕಲು ಸಾಧ್ಯವಾಯಿತೆಂದು ವಿವರಿಸುತ್ತಾನೆ. ಇಂದಿನ ಈ 1% ಪ್ರಜಾಪ್ರಭುತ್ವವನ್ನು ತಡೆಗಟ್ಟಲು ಪಿಕೆಟಿ ಪಿಸುಮಾತಿಗೆ ಕಿವಿಗೊಡುವುದೇ ಲೇಸು.


ಇದನ್ನೂ ಓದಿ: ಭಾರತದಲ್ಲಿ ಧರ್ಮಗಳು ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಅರಿತ್ತಿದ್ದೇವೆಯೇ? : ಬಿ. ಶ್ರೀಪಾದ ಭಟ್

460 ಕೋಟಿ ಜನರು ಹೊಂದಿರುವ ಒಟ್ಟು ಆಸ್ತಿ ಕೇವಲ 2000 ಜನರ ಕೈಯಲ್ಲಿದೆ! ದಾವೋಸ್‌ನಲ್ಲಿ ‘ಆಕ್ಸ್‌ಫಾಮ್’ ವರದಿ

ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...